ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿದರೆ ಮತ್ತೊಂದೆಡೆ ಹುಲಿ ದಾಳಿ ನಡೆಸಿ ಜಾನುವಾರುಗಳನ್ನು ಕೊಂದಿರುವ ಘಟನೆಯಿಂದ ರೈತರಲ್ಲಿ ಆತಂಕ ಉಂಟುಮಾಡಿದೆ.
ತಾಲ್ಲೂಕಿನ ಬೊಮ್ಮಲಾಪುರ ಸುತ್ತಲಿನ ಗ್ರಾಮಗಳ ಜನ-ಜಾನುವಾರುಗಳಿಗೆ ತೊಂದರೆ ನೀಡುತ್ತ ಜನರಿಗೆ ಆತಂಕ ಸೃಷ್ಟಿಸುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಸೆರೆ ಹಿಡಿಯಲಾಗಿದೆ.
ಮೂರು ವರ್ಷಗಳಿಂದ ಬೊಮ್ಮಲಾಪುರ ಭಾಗದಲ್ಲಿ ಕಾಣಿಸಿಕೊಳ್ಳುತ್ತ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆಗೆ ಒತ್ತಾಯಿಸಿ ರೈತರು ಅರಣ್ಯ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿಹಾಕಿದ್ದ ಘಟನೆ ಕೂಡ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಅರಣ್ಯ ಇಲಾಖೆಯ ಬೋನಿಗೆ ಬೀಳದ ಹುಲಿ ಜಮೀನುಗಳಲ್ಲಿ ಬಿಡುಬಿಟ್ಟು ಜಾನುವಾರುಗಳನ್ನು ಕೊಲ್ಲುತ್ತಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆ ಹಾಗೂ ಸಿಬ್ಬಂದಿ ನೆರವಿನಿಂದ ಬುಧವಾರ ರಾತ್ರಿ ಕಾರ್ಯಾಚರಣೆ ಕೈಗೊಂಡಿತು.
ಥರ್ಮಲ್ ಡ್ರೋಣ್ ಹಾರಿಸಿ ಹುಲಿಯ ಇರುವಿಕೆ ಪತ್ತೆಹಚ್ಚಿದ ನಂತರ ಪಶು ವೈದ್ಯರಾದ ವಾಸಿಂ ಹಾಗೂ ಗುರುಸ್ವಾಮಿ ಹುಲಿಗೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಿ ಸೆರೆಹಿಡಿದು ಬಂಡೀಪುರ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.
ಹೊಸದಿಲ್ಲಿ : ಕಳೆದ ಡಿಸೆಂಬರ್ನಲ್ಲಿ 25 ಬೇಸಿಸ್ ಪಾಯಿಂಟ್ ದರ ಕಡಿತದ ನಂತರ, ಭೌಗೋಳಿಕ ರಾಜಕೀಯ ಅನಿಶ್ಚಿತತೆಗಳ ನಡುವೆ ರಿಸರ್ವ್…
ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್ಸಿ…
ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…
ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…
ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…
ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…