ಚಾಮರಾಜನಗರ

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿದರೆ ಮತ್ತೊಂದೆಡೆ ಹುಲಿ ದಾಳಿ ನಡೆಸಿ ಜಾನುವಾರುಗಳನ್ನು ಕೊಂದಿರುವ ಘಟನೆಯಿಂದ ರೈತರಲ್ಲಿ ಆತಂಕ ಉಂಟುಮಾಡಿದೆ.

ತಾಲ್ಲೂಕಿನ ಬೊಮ್ಮಲಾಪುರ ಸುತ್ತಲಿನ ಗ್ರಾಮಗಳ ಜನ-ಜಾನುವಾರುಗಳಿಗೆ ತೊಂದರೆ ನೀಡುತ್ತ ಜನರಿಗೆ ಆತಂಕ ಸೃಷ್ಟಿಸುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಸೆರೆ ಹಿಡಿಯಲಾಗಿದೆ.
ಮೂರು ವರ್ಷಗಳಿಂದ ಬೊಮ್ಮಲಾಪುರ ಭಾಗದಲ್ಲಿ ಕಾಣಿಸಿಕೊಳ್ಳುತ್ತ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆಗೆ ಒತ್ತಾಯಿಸಿ ರೈತರು ಅರಣ್ಯ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿಹಾಕಿದ್ದ ಘಟನೆ ಕೂಡ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಅರಣ್ಯ ಇಲಾಖೆಯ ಬೋನಿಗೆ ಬೀಳದ ಹುಲಿ ಜಮೀನುಗಳಲ್ಲಿ ಬಿಡುಬಿಟ್ಟು ಜಾನುವಾರುಗಳನ್ನು ಕೊಲ್ಲುತ್ತಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆ ಹಾಗೂ ಸಿಬ್ಬಂದಿ ನೆರವಿನಿಂದ ಬುಧವಾರ ರಾತ್ರಿ ಕಾರ್ಯಾಚರಣೆ ಕೈಗೊಂಡಿತು.

ಥರ್ಮಲ್ ಡ್ರೋಣ್ ಹಾರಿಸಿ ಹುಲಿಯ ಇರುವಿಕೆ ಪತ್ತೆಹಚ್ಚಿದ ನಂತರ ಪಶು ವೈದ್ಯರಾದ ವಾಸಿಂ ಹಾಗೂ ಗುರುಸ್ವಾಮಿ ಹುಲಿಗೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಿ ಸೆರೆಹಿಡಿದು ಬಂಡೀಪುರ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

4 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

5 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

5 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

5 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

5 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

5 hours ago