ಚಾಮರಾಜನಗರ

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು ಸೆರೆ ಹಿಡಿದರೆ ಮತ್ತೊಂದೆಡೆ ಹುಲಿ ದಾಳಿ ನಡೆಸಿ ಜಾನುವಾರುಗಳನ್ನು ಕೊಂದಿರುವ ಘಟನೆಯಿಂದ ರೈತರಲ್ಲಿ ಆತಂಕ ಉಂಟುಮಾಡಿದೆ.

ತಾಲ್ಲೂಕಿನ ಬೊಮ್ಮಲಾಪುರ ಸುತ್ತಲಿನ ಗ್ರಾಮಗಳ ಜನ-ಜಾನುವಾರುಗಳಿಗೆ ತೊಂದರೆ ನೀಡುತ್ತ ಜನರಿಗೆ ಆತಂಕ ಸೃಷ್ಟಿಸುತ್ತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಸೆರೆ ಹಿಡಿಯಲಾಗಿದೆ.
ಮೂರು ವರ್ಷಗಳಿಂದ ಬೊಮ್ಮಲಾಪುರ ಭಾಗದಲ್ಲಿ ಕಾಣಿಸಿಕೊಳ್ಳುತ್ತ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆಗೆ ಒತ್ತಾಯಿಸಿ ರೈತರು ಅರಣ್ಯ ಸಿಬ್ಬಂದಿಯನ್ನು ಬೋನಿನಲ್ಲಿ ಕೂಡಿಹಾಕಿದ್ದ ಘಟನೆ ಕೂಡ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಆದರೆ ಅರಣ್ಯ ಇಲಾಖೆಯ ಬೋನಿಗೆ ಬೀಳದ ಹುಲಿ ಜಮೀನುಗಳಲ್ಲಿ ಬಿಡುಬಿಟ್ಟು ಜಾನುವಾರುಗಳನ್ನು ಕೊಲ್ಲುತ್ತಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಾಕಾನೆ ಹಾಗೂ ಸಿಬ್ಬಂದಿ ನೆರವಿನಿಂದ ಬುಧವಾರ ರಾತ್ರಿ ಕಾರ್ಯಾಚರಣೆ ಕೈಗೊಂಡಿತು.

ಥರ್ಮಲ್ ಡ್ರೋಣ್ ಹಾರಿಸಿ ಹುಲಿಯ ಇರುವಿಕೆ ಪತ್ತೆಹಚ್ಚಿದ ನಂತರ ಪಶು ವೈದ್ಯರಾದ ವಾಸಿಂ ಹಾಗೂ ಗುರುಸ್ವಾಮಿ ಹುಲಿಗೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಿ ಸೆರೆಹಿಡಿದು ಬಂಡೀಪುರ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

22 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

22 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

22 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

22 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

22 hours ago