Gundlupet Villagers master plan
ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದಲ್ಲಿ ಗ್ರಾಮಸ್ಥರೇ ಒಗ್ಗೂಡಿ ಅಕ್ರಮ ಮದ್ಯ ಮಾರಾಟ ಹಾಗೂ ಜೂಜಾಟ ನಡೆಯುವುದನ್ನು ತಡೆಯಲು ಮುಂದಾಗಿದ್ದು, ಅನೈತಿಕ ಚಟುವಟಿಕೆ ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ.
ಗ್ರಾಮಸ್ಥರೇ ಸ್ವತಃ ಕಾನೂನನ್ನು ಕೈಗೆ ತೆಗೆದುಕೊಂಡು ಕಟ್ಟಾಜ್ಞೆ ಹೊರಡಿಸಿದ್ದು, ಗ್ರಾಮದಲ್ಲಿ ನಡೆಯುವ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಅಕ್ರಮ ಮದ್ಯ ಮಾರಾಟ, ಜೂಜಾಟದಂತಹ ಅನೈತಿಕ ಚಟುವಟಿಕೆಗಳು ನಡೆದರೆ ಭಾರೀ ದಂಡ ವಿಧಿಸುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಿದರೆ 50 ಸಾವಿರ ದಂಡ,
ಜೂಜಾಟವಾಡಿದರೆ 50 ಸಾವಿರ ದಂಡ, ಗ್ರಾಮಕ್ಕೆ ಅನಧಿಕೃತ ವ್ಯಕ್ತಿ ಪ್ರವೇಶ ಮಾಡಿದರೆ 1 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ತಪ್ಪು ಮಾಡಿರುವವರ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿದರೆ ಅಂತಹ ವ್ಯಕ್ತಿಗಳಿಗೆ 10 ಸಾವಿರ ಬಹುಮಾನ ಘೋಷಣೆ ಮಾಡಲಾಗುವುದು ಎಂದು ಗ್ರಾಮದ ಯಜಮಾನರುಗಳೇ ಘೋಷಣೆ ಮಾಡಿದ್ದಾರೆ. ಈ ಕುರಿತು ಸಭೆ ನಡೆಸಿರುವ ಗ್ರಾಮಸ್ಥರು ಕಟ್ಟಾಜ್ಞೆ ಹೊರಡಿಸಿದ್ದು, ಗ್ರಾಮದಲ್ಲಿ ಯಾವುದೇ ಅನೈತಿಕ ಚಟುವಟಿಕೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಿದ್ದಾರೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…