ಚಾಮರಾಜನಗರ: ಸಫಾರಿ ವಾಹನದ ಮೇಲೆ ಕಾಡಾನೆಯೊಂದು ದಾಳಿಗೆ ಯತ್ನಿಸಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಫಾರಿಯಲ್ಲಿ ನಡೆದಿದೆ.
ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾಡಾನೆಯೊಂದು ಸಫಾರಿ ಜೀಪ್ ಕಂಡ ಕೂಡಲೇ ಅಟ್ಟಾಡಿಸಿಕೊಂಡು ಬಂದಿದೆ. ಈ ವೇಳೆ ಎಚ್ಚೆತ್ತುಕೊಂಡ ಚಾಲಕ ಜೀಪನ್ನು ರಿವರ್ಸ್ ಚಲಾಯಿಸಿ ಅಪಾಯದಿಂದ ಪಾರಾಗಿದ್ದಾರೆ.
ಈ ವೇಳೆ ರೊಚ್ಚಿಗೆದ್ದ ಕಾಡಾನೆ ನೆಲಕ್ಕೆ ಕಾಲು ಕೆರೆದು ವಾರ್ನಿಂಗ್ ಕೊಟ್ಟಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.





