ಚಾಮರಾಜನಗರ

ಗುಂಡ್ಲುಪೇಟೆ: ರಕ್ಷಣಾ ಬೇಲಿ ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವು

ಬೇಗೂರು (ಗುಂಡ್ಲುಪೇಟೆ):  ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಅಕ್ರಮವಾಗಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಹಾಯಿಸಲಾಗಿದ್ದ ವಿದ್ಯುತ್ತ್ ಸ್ಪರ್ಶದಿಂದ ಕಾಡಾನೆಯೊಂದು ಮೃತ್ತಪಟ್ಟಿರುವ ಘಟನೆ ನಡೆದಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಓಂಕಾರ ಅರಣ್ಯವಲಯದ ಕುರಬರಹುಂಡಿ (ಶಿವಕುಮಾರಪುರ) ಗ್ರಾಮದ ಹೊರವಲಯದ ಕಾಡಂಚಿನ ಶಿವರಾಜಪ್ಪ ಎಂಬುವರ ಜಮೀನಿನಲ್ಲಿ ಕಾಡಿನಿಂದ ಆಹಾರ ಅರಸಿ ನಾಡಿನತ್ತ ಬಂದ ಸುಮಾರು ೨೫ ರಿಂದ ೩೦ ವರ್ಷದ ಗಂಡಾನೆ (ಒಂಟಿ ಸಲಗ) ಸಾವಿಗೀಡಾಗಿದೆ.

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಪಶುವೈದ್ಯಾಧಿಕಾರಿ ಡಾ. ವಾಸೀಂ ಮಿರ್ಜಾ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ನಂತರ ಮೃತ ಕಾಡಾನೆಯ ಕಳೆಬರಹವನ್ನು ಸ್ಥಳದಲ್ಲೆ ಹೂಳಲಾಯಿತು.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಿ.ಎಫ್.ಒ ರಮೇಶ್ ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಎ.ಸಿ.ಎಫ್. ರವೀಂದ್ರ , ವಲಯ ಅರಣ್ಯ ಅಧಿಕಾರಿ ಸತೀಶ್, ಬೇಗೂರು ವೃತ್ತ ನೀರಿಕ್ಷಕ ಕಿರಣ್ ಕುಮಾರ್, ಪಿ.ಎಸ್.ಐ ಚರಣ್ ಗೌಡ ಹಾಜರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

8 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

8 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

8 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

8 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

8 hours ago