ಚಾಮರಾಜನಗರ

ಗುಂಡ್ಲುಪೇಟೆ | ಜಮೀನಿನಲ್ಲಿ ಕಾಡಾನೆಗಳ ದಾಂಧಲೆ: ಕಂಗಾಲಾದ ರೈತರು

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ.

ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಉತ್ತಮ ಇಳುವರಿ ಕೊಟ್ಟಿದ್ದ ಪರಿಣಾಮ ಈ ಬಾರಿ ಹೆಚ್ಚಿನ ಆದಾಯದ ನಿರೀಕ್ಷೆಯಲ್ಲಿದ್ದ ರೈತರು ಈಗ ತೀವ್ರ ಸಂಕಷ್ಟ ಅನುಭವಿಸುತ್ತಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು, ಸಂಜೆಯಾದರಂತೂ ಜಮೀನುಗಳಿಗೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಿನ ಅನಾಹುತ ಆಗುವ ಮುಂಚೆ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳ ಹಾವಳಿ ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

27 mins ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

31 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

36 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

45 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

1 hour ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

2 hours ago