ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ.
ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಶೇಖರ ಪುಟ್ಟಸ್ವಾಮಿ, ಬಸಪ್ಪ ದೇವರು, ಸದಾಶಿವಪ್ಪ, ಹಿಂದುಳಿದ ವರ್ಗ (ಎ) ಕ್ಷೇತ್ರದಿಂದ ರಾಮೇಗೌಡ, ಹಿಂದುಳಿದ ವರ್ಗ (ಬಿ) ಕ್ಷೇತ್ರದಿಂದ ಜಿ. ಮಹೇಶ್, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಮಕೃಷ್ಣಯ್ಯ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಹೊಣಕಾರನಾಯಕ, ಮಹಿಳಾ ಮೀಸಲು ಕ್ಷೇತ್ರದಿಂದ ಎಸ್. ರತ್ನಮ್ಮ, ಶಿವಮ್ಮ ಗೆಲುವು ಸಾಧಿಸಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎಂ. ಮಹದೇವಸ್ವಾಮಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿ ಗೆಲುವು:
ಕೋಟೆಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭೋಗಯ್ಯನ ಹುಂಡಿಯ ಬಿಎನ್ ಗಣೇಶ್ ರವರು ಜಯಶೀಲರಾಗಿದ್ದಾರೆ.
ತಮ್ಮ ಮತ ಹಾಕದೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ:
ಶುಕ್ರವಾರ ನಡೆದ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸದಾಶಿವಪ್ಪ ತನ್ನ ಮತ ಹಾಕಿಕೊಳ್ಳದೆ 165 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಈ ಸಂದರ್ಭದಲ್ಲಿ ಬೆಟ್ಟದಮಾದಹಳ್ಳಿ ಮಹದೇವಸ್ವಾಮಿ, ಎಪಿಎಂಸಿ ಆರ್.ಎಸ್.ನಾಗರಾಜು, ಸಾಹುಕಾರ್ ಬಿ.ಪಿ. ನಂದೀಶ್, ಮಲ್ಲೇಶ್, ಗೌಡಿಕೆ ಬಸವರಾಜಪ್ಪ, ಗೌಡಿಕೆ ಕೆಪಿ ಕುಮಾರ್, ಕುರುಬರಹುಂಡಿ ಕೋಟೆ ಕೆರೆಯ ರಂಗನಾಥ, ಶಂಕರನಾಯಕ, ಸಿದ್ದು ಶಿವಲಿಂಗನಾಯಕ, ಬೆಟ್ಟದಮಾದಹಳ್ಳಿ ಮಲ್ಲು ಕುರುಬರಹುಂಡಿ ಚೇರ್ಮನ್ ಮಹೇಶ್, ಶಿವಲಿಂಗಪ್ಪ ಕೆಂಚಪ್ಪ, ಚಿಕ್ಕಮಾದಪ್ಪ ಮಾದಪ್ಪ ಬೇಗೂರು ಜಗದೀಶ್ ನೂತನ ನಿರ್ದೇಶಕರು ಹಾಗೂ ಕೋಟೆಕೆರೆ, ಭೋಗಯ್ಯನಹುಂಡಿ, ಕುರುಬರಹುಂಡಿ, ಬೆಟ್ಟದಮಾದಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…