ಗುಂಡ್ಲುಪೇಟೆ: ತಾಲೂಕಿನ ಬೇಗೂರು ಹೋಬಳಿಯ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ 12ರಲ್ಲಿ ಕಾಂಗ್ರೆಸ್ 11 ಕ್ಷೇತ್ರ, ಬಿಜೆಪಿ 1 ಕ್ಷೇತ್ರ ಗೆಲುವು ಸಾಧಿಸಿದೆ.
ಕೊಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತರಾದ ಶೇಖರ ಪುಟ್ಟಸ್ವಾಮಿ, ಬಸಪ್ಪ ದೇವರು, ಸದಾಶಿವಪ್ಪ, ಹಿಂದುಳಿದ ವರ್ಗ (ಎ) ಕ್ಷೇತ್ರದಿಂದ ರಾಮೇಗೌಡ, ಹಿಂದುಳಿದ ವರ್ಗ (ಬಿ) ಕ್ಷೇತ್ರದಿಂದ ಜಿ. ಮಹೇಶ್, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಮಕೃಷ್ಣಯ್ಯ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಹೊಣಕಾರನಾಯಕ, ಮಹಿಳಾ ಮೀಸಲು ಕ್ಷೇತ್ರದಿಂದ ಎಸ್. ರತ್ನಮ್ಮ, ಶಿವಮ್ಮ ಗೆಲುವು ಸಾಧಿಸಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎಂ. ಮಹದೇವಸ್ವಾಮಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಅಭ್ಯರ್ಥಿ ಗೆಲುವು:
ಕೋಟೆಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಾಲಗಾರರ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಭೋಗಯ್ಯನ ಹುಂಡಿಯ ಬಿಎನ್ ಗಣೇಶ್ ರವರು ಜಯಶೀಲರಾಗಿದ್ದಾರೆ.
ತಮ್ಮ ಮತ ಹಾಕದೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ:
ಶುಕ್ರವಾರ ನಡೆದ ಕೋಟೆಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸದಾಶಿವಪ್ಪ ತನ್ನ ಮತ ಹಾಕಿಕೊಳ್ಳದೆ 165 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಈ ಸಂದರ್ಭದಲ್ಲಿ ಬೆಟ್ಟದಮಾದಹಳ್ಳಿ ಮಹದೇವಸ್ವಾಮಿ, ಎಪಿಎಂಸಿ ಆರ್.ಎಸ್.ನಾಗರಾಜು, ಸಾಹುಕಾರ್ ಬಿ.ಪಿ. ನಂದೀಶ್, ಮಲ್ಲೇಶ್, ಗೌಡಿಕೆ ಬಸವರಾಜಪ್ಪ, ಗೌಡಿಕೆ ಕೆಪಿ ಕುಮಾರ್, ಕುರುಬರಹುಂಡಿ ಕೋಟೆ ಕೆರೆಯ ರಂಗನಾಥ, ಶಂಕರನಾಯಕ, ಸಿದ್ದು ಶಿವಲಿಂಗನಾಯಕ, ಬೆಟ್ಟದಮಾದಹಳ್ಳಿ ಮಲ್ಲು ಕುರುಬರಹುಂಡಿ ಚೇರ್ಮನ್ ಮಹೇಶ್, ಶಿವಲಿಂಗಪ್ಪ ಕೆಂಚಪ್ಪ, ಚಿಕ್ಕಮಾದಪ್ಪ ಮಾದಪ್ಪ ಬೇಗೂರು ಜಗದೀಶ್ ನೂತನ ನಿರ್ದೇಶಕರು ಹಾಗೂ ಕೋಟೆಕೆರೆ, ಭೋಗಯ್ಯನಹುಂಡಿ, ಕುರುಬರಹುಂಡಿ, ಬೆಟ್ಟದಮಾದಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…