Mysore
32
moderate rain

Social Media

ಭಾನುವಾರ, 20 ಸೆಪ್ಟೆಂಬರ್ 2026
Light
Dark

ಗುಂಡ್ಲಪೇಟೆ: ಬೀದಿ ನಾಯಿ ದಾಳಿಗೆ ಜಿಂಕೆ ಸಾವು

ಚಾಮರಾಜನಗರ: ಬೀದಿ ನಾಯಿ ದಾಳಿಗೆ ಜಿಂಕೆ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಾಳನಹುಂಡಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ನಡೆದಿದೆ.

ಜಿಂಕೆ ಸಾವನ್ನಪ್ಪಿರುವುದನ್ನು ಕಂಡ ಸ್ಥಳೀಯರು ಓಂಕಾರ ವಲಯದ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಆದರೆ, ಅರಣ್ಯ ಇಲಾಖೆಯಿಂದ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಇತ್ತ ಸಾವನ್ನಪ್ಪಿದ ಜಿಂಕೆ ಮೃತದೇಹ ಅದೇ ಸ್ಥಳದಲ್ಲಿ ಬಿದ್ದಿದೆ.

Tags:
error: Content is protected !!