ಮಹೇಂದ್ರ ಹಸಗೂಲಿ
ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿ ತಪ್ಪಿ ಬಂದಿದ್ದ ಜಿಂಕೆಯೊಂದನ್ನು ನಿವಾಸಿಗಳು ರಕ್ಷಣೆ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಕಾಡಿನಿಂದ ದಾರಿತಪ್ಪಿ ನಾಡಿಗೆ ಬಂದ ಜಿಂಕೆಯನ್ನು ಕಂಡ ಬೀದಿ ನಾಯಿಗಳು ಅದರ ಮೇಲೆ ದಾಳಿ ಮಾಡಲು ಮುಂದಾಗಿದ್ದವು. ಇದರಿಂದ ಹೆದರಿದ ಜಿಂಕೆಯು ಪಟ್ಟಣದ ಹೊರವಲಯದ ಕೇರಳ ರಸ್ತೆಯಲ್ಲಿರುವ ನೂರ್ ಗ್ಯಾರೆಜ್ ಒಳಗೆ ನುಗ್ಗಿತು. ಇದನ್ನು ಕಂಡ ಹೆಚ್ ಎಸ್ ಮಹದೇವ ಪ್ರಸಾದ್ ನಗರದ ನಿವಾಸಿಗಳು ಜಿಂಕೆಯನ್ನು ರಕ್ಷಣೆ ಮಾಡಿದರು.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯ ಆರೋಗ್ಯ ತಪಾಸಣೆ ನಡೆಸಿ ಅರಣ್ಯ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಬಂಡೀಪುರ ಅರಣ್ಯಕ್ಕೆ ಬಿಟ್ಟಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…