ಚಾಮರಾಜನಗರ

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು 

ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗಿದ್ದು, ಜನವಸತಿ ಹೆಚ್ಚಿರುವ ಗ್ರಾಮದ ಮಧ್ಯೆ ಇರುವ ದೇವಸ್ಥಾನದಲ್ಲಿಯೇ ಕಳ್ಳತನ ನಡೆಯುತ್ತಿದೆ.

ಗುಂಡ್ಲುಪೇಟೆ ತಾಲ್ಲೂಕಿನ ಬರಗಿ ಗ್ರಾಮದಲ್ಲಿ ಸೋಮವಾರ ಬಸವೇಶ್ವರ ದೇವಸ್ಥಾನ ಲೋಕಾರ್ಪಣೆಯಾಗಿತ್ತು. ಸುತ್ತೂರು ಶ್ರೀಗಳಿಂದ ಹಿಡಿದು ಹತ್ತಾರು ಹರಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಕೂಡ ಸೇರಿದ್ದರು. ಇದಾದ ಎರಡೇ ದಿನಕ್ಕೆ ಗುರುವಾರ ಮುಂಜಾನೆ 2 ಗಂಟೆಯಿಂದ 3 ಗಂಟೆಯ ಅವಧಿಯಲ್ಲಿ ಕಳ್ಳತನ ನಡೆದಿದೆ. ದೇವರಿಗೆ ಚಿನ್ನಾಭರಣ ಅಲಂಕಾರ ಮಾಡಿದ್ದರು. ಈ ವೇಳೆ ಈ ಕೃತ್ಯ ನಡೆದಿದೆ.

ದೇವರನ್ನೆ ಹೊತ್ತೋಯ್ದ ಕಳ್ಳರು: ಬರಗಿ ಗ್ರಾಮದ ದೇವಸ್ಥಾನದ ಒಳಗೆ ಪಾರ್ವತಾಂಭೆ ದೇವರ ಬೆಳ್ಳಿ ವಿಗ್ರಹ ಮತ್ತು ಚಿನ್ನದ ತಾಳಿ, ಎರಡು ಕಾಸು, ನಾಲ್ಕು ಗುಂಡು, ಓಲೆ ಜುಮುಕಿ, ತಾಳಿ, ಬೆಳ್ಳಿ ಬಸವ, ಬೆಳ್ಳಿ ಚಂಬು, ಬೆಳ್ಳಿ ಛತ್ರಿ ಸುರಪಾನಿ, ಇರಿಸಲಾಗಿತ್ತು‌ ಕಳ್ಳರು ಬಾಗಿಲ ಬೀಗದ ಚಿಲಕ ಕೂಯ್ದು ದೇವರನ್ನು ಇರಿಸಿದ್ದ ವಿಗ್ರಹನ್ನು ಹೊತ್ತೊಯ್ದಿದ್ದಾರೆ, ಸುಮಾರು 15 ಗ್ರಾಂ ಚಿನ್ನ, 5 ರಿಂದ 6 ಕೆ.ಜಿ ಬೆಳ್ಳಿ ಕಳವು ಮಾಡಿದ್ದಾರೆಂದು ಬರಗಿ ಗ್ರಾಮಸ್ಥರು ತಿಳಿಸಿದ್ದಾರೆ.

ಗ್ರಾಮದ ಕಾರ್ಯವಾದ ಎರಡೇ ದಿನಕ್ಕೆ ಕಳ್ಳತನ ನಡೆಸುತ್ತಿರುವ ತಂಡ: ತಾಲ್ಲೂಕಿನ ಬನ್ನೀತಾಳಪುರ ಗ್ರಾಮ ಹಾಗೂ ಭೀಮನಭೀಡು ಗ್ರಾಮದಲ್ಲಿ ಗ್ರಾಮದ ಮಾರಿಹಬ್ಬ ಮತ್ತಿತರ ಕಾರ್ಯಕ್ರಮವಾದ ಎರಡೇ ದಿನಕ್ಕೆ ಐದಾರು ದೇವಸ್ಥಾನದಲ್ಲಿ ಕಳ್ಳತನ ಮಾಡಿರುವ ತಂಡವೇ ಇಲ್ಲಿ ಕಳ್ಳತನ ಮಾಡಿರುವ ಅನುಮಾನ ವ್ಯಕ್ತವಾಗುತ್ತಿದೆ ಎಂಬುದು ಜನರ ಆರೋಪವಾಗಿದೆ.

ಸ್ಥಳಕ್ಕೆ ಬೆರಳಚ್ಚು ತಜ್ಞರ ಭೇಟಿ: ಬರಗಿ ಬಸವೇಶ್ವರ ದೇವಸ್ಥಾನದಲ್ಲಿ ಕಳ್ಳತನ‌ ನಡೆದಿದ್ದು ಬೆರಳಚ್ಚು ತಜ್ಞರು ಸ್ಯಾಂಪಲ್ ಕಲೆಹಾಕಿದ್ದು, ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೂಡಲೇ ಆರೋಪಿಗಳ ಪತ್ತೆಗೆ ಬಲೆ ಬೀಸಬೇಕಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

6 mins ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

1 hour ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

1 hour ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago