ಚಾಮರಾಜನಗರ

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ.

ಘಟನೆ ವಿವರ…
ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ ದಾಳಿ ನಡೆಸಲು ಹುಲಿ ಮುಗಿಬಿದ್ದಾಗ ಹುಲಿಯನ್ನು ಹಿಮ್ಮೆಟ್ಟಿಸಲು ಯತ್ನಿಸಿದ್ದಾರೆ. ಆಗ ಹುಲಿ ಇವರ ಮೇಲೆ ದಾಳಿಗೆ ಮುಂದಾಗಿದೆ. ತಕ್ಷಣ ರೈತ ಮಲಿಯಪ್ಪ ನೆಲಕ್ಕೆ ಕುಳಿತಿದ್ದಾರೆ ಹಾಗ ಹುಲಿಯ ಕಾಲುಗಳು ಕಣ್ಣಿನ ಸಮೀಪ ಮತ್ತು ತಲೆಗೆ ತಾಗಿದೆ ತಕ್ಷಣ ರೈತ ಓಡಿ ಗ್ರಾಮದ ಕಡೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಇದನ್ನು ಓಧಿ: ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಭಯಭೀತರಾದ ಜನ
ಕುಂದಕೆರೆ ಭಾಗದಲ್ಲಿ ಹುಲಿ ಇರುವ ವಿಚಾರವಾಗಿ ಅನೇಕ ಬಾರಿ ಕೂಂಬಿಂಗ್ ನಡೆಸುವಂತೆ ಹೇಳಿದ್ದರು. ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುತ್ತಿಲ್ಲ. ಆಗಾಗಿ ರೈತಾಪಿ ವರ್ಗ ಜಮೀನುಗಳಲ್ಲಿ ಕೆಲಸ ಮಾಡಲು ಭಯಭೀತರಾಗಿದ್ದು, ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಹುಲಿ ಚಿರತೆಗಳ ಸೆರೆಗೆ ಬೋನ್ ಇರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಎರಡು ಗಂಟೆಯಾದರು ಬಾರದ ಆಂಬುಲೆನ್ಸ್, ಅರಣ್ಯ ಇಲಾಖೆ ಅಧಿಕಾರಿಗಳು:
ಹುಲಿ ದಾಳಿಯಾಗಿ ಎರಡು ಗಂಟೆಯಾಗಿದೆ ಎಂದು ಕರೆ ಮಾಡಿದರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ಅಲ್ಲದೆ ಎರಡು ಗಂಟೆಯಾದರೂ ಅಂಬುಲೆನ್ಸ್ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

18 mins ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

36 mins ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

48 mins ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

1 hour ago

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…

1 hour ago

ತಮಿಳುನಾಡು ವಿಧಾನಸಭಾ ಚುನಾವಣೆ: ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿವೈಎಸ್ಪಿ ಭೇಟಿ, ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು,…

1 hour ago