ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ.
ಘಟನೆ ವಿವರ…
ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ ದಾಳಿ ನಡೆಸಲು ಹುಲಿ ಮುಗಿಬಿದ್ದಾಗ ಹುಲಿಯನ್ನು ಹಿಮ್ಮೆಟ್ಟಿಸಲು ಯತ್ನಿಸಿದ್ದಾರೆ. ಆಗ ಹುಲಿ ಇವರ ಮೇಲೆ ದಾಳಿಗೆ ಮುಂದಾಗಿದೆ. ತಕ್ಷಣ ರೈತ ಮಲಿಯಪ್ಪ ನೆಲಕ್ಕೆ ಕುಳಿತಿದ್ದಾರೆ ಹಾಗ ಹುಲಿಯ ಕಾಲುಗಳು ಕಣ್ಣಿನ ಸಮೀಪ ಮತ್ತು ತಲೆಗೆ ತಾಗಿದೆ ತಕ್ಷಣ ರೈತ ಓಡಿ ಗ್ರಾಮದ ಕಡೆ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ.
ಇದನ್ನು ಓಧಿ: ಏಕತಾ ಮಾಲ್ ನಿರ್ಮಾಣಕ್ಕೆ ಹೈಕೋರ್ಟ್ ತಡೆ
ಭಯಭೀತರಾದ ಜನ
ಕುಂದಕೆರೆ ಭಾಗದಲ್ಲಿ ಹುಲಿ ಇರುವ ವಿಚಾರವಾಗಿ ಅನೇಕ ಬಾರಿ ಕೂಂಬಿಂಗ್ ನಡೆಸುವಂತೆ ಹೇಳಿದ್ದರು. ಅರಣ್ಯ ಇಲಾಖೆ ಹುಲಿ ಸೆರೆ ಹಿಡಿಯುತ್ತಿಲ್ಲ. ಆಗಾಗಿ ರೈತಾಪಿ ವರ್ಗ ಜಮೀನುಗಳಲ್ಲಿ ಕೆಲಸ ಮಾಡಲು ಭಯಭೀತರಾಗಿದ್ದು, ಅರಣ್ಯ ಇಲಾಖೆ ಕೂಂಬಿಂಗ್ ನಡೆಸಿ ಹುಲಿ ಚಿರತೆಗಳ ಸೆರೆಗೆ ಬೋನ್ ಇರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಎರಡು ಗಂಟೆಯಾದರು ಬಾರದ ಆಂಬುಲೆನ್ಸ್, ಅರಣ್ಯ ಇಲಾಖೆ ಅಧಿಕಾರಿಗಳು:
ಹುಲಿ ದಾಳಿಯಾಗಿ ಎರಡು ಗಂಟೆಯಾಗಿದೆ ಎಂದು ಕರೆ ಮಾಡಿದರು ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿಲ್ಲ. ಅಲ್ಲದೆ ಎರಡು ಗಂಟೆಯಾದರೂ ಅಂಬುಲೆನ್ಸ್ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…