ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ.
ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್ನಲ್ಲಿ ಚಿರತೆ ಮರಿ ಇರಿಸಲಾಗಿತ್ತು. ಆದರೆ ತಾಯಿ ಚಿರತೆ ಬಾರದ ಕಾರಣ ಬೋನಿನಲ್ಲಿದ್ದ ಚಿರತೆ ಮರಿಗಳನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿದೆ. ಮತ್ತೆ ಸಂಜೆ ಮರಿಗಳನ್ನು ಬೋನಿನಲ್ಲಿ ಇರಿಸಲಾಗುವುದು. ಎರಡ್ಮೂರು ದಿನಗಳವರೆಗೂ ತಾಯಿ ಚಿರತೆ ಕಾಣದಿದ್ದರೆ ಅವುಗಳನ್ನು ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು ವಲಯಾಧಿಕಾರಿ ಶಿವಕುಮಾರ್ ತಿಳಿಸಿದರು.
ಮರಿ ಚಿರತೆಗಳು ತಾಯಿ ಚಿರತೆಯ ಜೊತೆ ಇರಬೇಕಾದ್ದರಿಂದ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಮರಿಗಳ ಹುಡುಕಾಟದಲ್ಲಿ ತಾಯಿ ಚಿರತೆ ಬೋನಿಗೆ ಬಿದ್ದರೆ ತಾಯಿ ಚಿರತೆ ಜೊತೆ ಮರಿ ಚಿರತೆಗಳನ್ನು ಕಾಡಿಗೆ ಬಿಡಲಾಗುತ್ತದೆ. ತಾಯಿ ಸಿಗದಿದ್ದರೆ ಮರಿಗಳನ್ನು ಪೋಷಣೆ ಮಾಡುವ ಉದ್ದೇಶದಿಂದ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು ಅರಣ್ಯಾಧಿಕಾರಿ ತಿಳಿಸಿದರು.
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲು…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಾವಳಿ ಮಿತಿ ಮೀರಿದೆ. ಉಳ್ಳವರು ಲಂಚ ಕೊಟ್ಟು ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಾರೆ. ಆದರೆ…
ಮಾರ್ಚ್ ೬ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೨೦೨೬-೨೭ ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯದಲ್ಲಿ ಪರಿಶಿಷ್ಟ ಜಾತಿ…
ಚಾಮರಾಜನಗರದ ಅಗ್ರಹಾರ ಮೊದಲಾದ ಪ್ರದೇಶದಲ್ಲಿರುವ ಚರಂಡಿಗಳಲ್ಲಿ ಹೂಳು ತುಂಬಿದ್ದು, ಸ್ವಚ್ಛತೆ ಇಲ್ಲದೆ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ರೋಗ ಭೀತಿಯುಂಟಾಗಿದೆ.…
ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ರ ಕಟ್ಟುನಿಟ್ಟಿನ ವಯೋಮಿತಿ ನಿಗದಿಪಡಿಸಿರುವುದು ರಾಜ್ಯದ ಸುಮಾರು ೨.೩೦ ಲಕ್ಷ ಮಕ್ಕಳ ಶೈಕ್ಷಣಿಕ ಹಿತಾಸಕ್ತಿಗೆ…
ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಕಲ್ಲಂಗಡಿ ಪೂರೈಕೆ; ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯ ಮೈಸೂರು: ಬೇಸಿಗೆ ಬಿಸಿಲಿನ ದಾಹ ತಣಿಸಲು ಮಾರುಕಟ್ಟೆಗೆ ಲಗ್ಗೆ…