ಚಾಮರಾಜನಗರ

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು

ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ.

ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್‌ನಲ್ಲಿ ಚಿರತೆ ಮರಿ ಇರಿಸಲಾಗಿತ್ತು. ಆದರೆ ತಾಯಿ ಚಿರತೆ ಬಾರದ ಕಾರಣ ಬೋನಿನಲ್ಲಿದ್ದ ಚಿರತೆ ಮರಿಗಳನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿದೆ. ಮತ್ತೆ ಸಂಜೆ ಮರಿಗಳನ್ನು ಬೋನಿನಲ್ಲಿ ಇರಿಸಲಾಗುವುದು. ಎರಡ್ಮೂರು ದಿನಗಳವರೆಗೂ ತಾಯಿ ಚಿರತೆ ಕಾಣದಿದ್ದರೆ ಅವುಗಳನ್ನು ಪುನರ್ವಸತಿ ಕೇಂದ್ರಕ್ಕೆ‌ ಕಳಿಸಲಾಗುವುದು ಎಂದು ವಲಯಾಧಿಕಾರಿ ಶಿವಕುಮಾರ್ ತಿಳಿಸಿದರು.

ಮರಿ ಚಿರತೆಗಳು ತಾಯಿ ಚಿರತೆಯ ಜೊತೆ ಇರಬೇಕಾದ್ದರಿಂದ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಮರಿಗಳ ಹುಡುಕಾಟದಲ್ಲಿ ತಾಯಿ ಚಿರತೆ ಬೋನಿಗೆ ಬಿದ್ದರೆ ತಾಯಿ ಚಿರತೆ ಜೊತೆ ಮರಿ ಚಿರತೆಗಳನ್ನು ಕಾಡಿಗೆ ಬಿಡಲಾಗುತ್ತದೆ. ತಾಯಿ ಸಿಗದಿದ್ದರೆ ಮರಿಗಳನ್ನು‌ ಪೋಷಣೆ ಮಾಡುವ ಉದ್ದೇಶದಿಂದ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು‌ ಅರಣ್ಯಾಧಿಕಾರಿ ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

2 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

2 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

2 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

3 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

3 hours ago