ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ.
ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್ನಲ್ಲಿ ಚಿರತೆ ಮರಿ ಇರಿಸಲಾಗಿತ್ತು. ಆದರೆ ತಾಯಿ ಚಿರತೆ ಬಾರದ ಕಾರಣ ಬೋನಿನಲ್ಲಿದ್ದ ಚಿರತೆ ಮರಿಗಳನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿದೆ. ಮತ್ತೆ ಸಂಜೆ ಮರಿಗಳನ್ನು ಬೋನಿನಲ್ಲಿ ಇರಿಸಲಾಗುವುದು. ಎರಡ್ಮೂರು ದಿನಗಳವರೆಗೂ ತಾಯಿ ಚಿರತೆ ಕಾಣದಿದ್ದರೆ ಅವುಗಳನ್ನು ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು ವಲಯಾಧಿಕಾರಿ ಶಿವಕುಮಾರ್ ತಿಳಿಸಿದರು.
ಮರಿ ಚಿರತೆಗಳು ತಾಯಿ ಚಿರತೆಯ ಜೊತೆ ಇರಬೇಕಾದ್ದರಿಂದ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಮರಿಗಳ ಹುಡುಕಾಟದಲ್ಲಿ ತಾಯಿ ಚಿರತೆ ಬೋನಿಗೆ ಬಿದ್ದರೆ ತಾಯಿ ಚಿರತೆ ಜೊತೆ ಮರಿ ಚಿರತೆಗಳನ್ನು ಕಾಡಿಗೆ ಬಿಡಲಾಗುತ್ತದೆ. ತಾಯಿ ಸಿಗದಿದ್ದರೆ ಮರಿಗಳನ್ನು ಪೋಷಣೆ ಮಾಡುವ ಉದ್ದೇಶದಿಂದ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು ಅರಣ್ಯಾಧಿಕಾರಿ ತಿಳಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…