ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಣೆ ಮಾಡಲಾಗಿದೆ.
ಚಿರತೆ ಮರಿಗಳು ಸಿಕ್ಕಿದ್ದ ಹಿನ್ನೆಲೆಯಲ್ಲಿ ತಾಯಿ ಚಿರತೆ ಬರುವ ನಿರೀಕ್ಷೆಯ ಮೇರೆಗೆ ಜಮೀನಲ್ಲಿ ರಾತ್ರಿ ಬೋನ್ನಲ್ಲಿ ಚಿರತೆ ಮರಿ ಇರಿಸಲಾಗಿತ್ತು. ಆದರೆ ತಾಯಿ ಚಿರತೆ ಬಾರದ ಕಾರಣ ಬೋನಿನಲ್ಲಿದ್ದ ಚಿರತೆ ಮರಿಗಳನ್ನು ಗುಂಡ್ಲುಪೇಟೆ ಬಫರ್ ಜೋನ್ ವಲಯಕ್ಕೆ ತಂದು ಆರೈಕೆ ಮಾಡಲಾಗುತ್ತಿದೆ. ಮತ್ತೆ ಸಂಜೆ ಮರಿಗಳನ್ನು ಬೋನಿನಲ್ಲಿ ಇರಿಸಲಾಗುವುದು. ಎರಡ್ಮೂರು ದಿನಗಳವರೆಗೂ ತಾಯಿ ಚಿರತೆ ಕಾಣದಿದ್ದರೆ ಅವುಗಳನ್ನು ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು ವಲಯಾಧಿಕಾರಿ ಶಿವಕುಮಾರ್ ತಿಳಿಸಿದರು.
ಮರಿ ಚಿರತೆಗಳು ತಾಯಿ ಚಿರತೆಯ ಜೊತೆ ಇರಬೇಕಾದ್ದರಿಂದ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಮರಿಗಳ ಹುಡುಕಾಟದಲ್ಲಿ ತಾಯಿ ಚಿರತೆ ಬೋನಿಗೆ ಬಿದ್ದರೆ ತಾಯಿ ಚಿರತೆ ಜೊತೆ ಮರಿ ಚಿರತೆಗಳನ್ನು ಕಾಡಿಗೆ ಬಿಡಲಾಗುತ್ತದೆ. ತಾಯಿ ಸಿಗದಿದ್ದರೆ ಮರಿಗಳನ್ನು ಪೋಷಣೆ ಮಾಡುವ ಉದ್ದೇಶದಿಂದ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗುವುದು ಎಂದು ಅರಣ್ಯಾಧಿಕಾರಿ ತಿಳಿಸಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…