ಚಾಮರಾಜನಗರ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ಚರಂಡಿ ನೀರು; ದ್ವೀಪದಂತಾದ ಕಂದೇಗಾಲ ಗ್ರಾಮ

ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.

ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ ಸಮುದಾಯದ ಬೀದಿಗಳಲ್ಲಿ ನಿರ್ಮಿಸಿರುವ ಚರಂಡಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ರಾತ್ರಿ ಇಡೀ ಕುಟುಂಬಗಳು ಜಾಗರಣೆ ಮಾಡಿ, ನೀರನ್ನು ಹೊರ ತೆಗೆಯುವಲ್ಲಿ ಹರ ಸಾಹಸ ಪಟ್ಟವು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಇಡೀ ಕುಟುಂಬಗಳು ಜಾಗರಣೆ ಮಾಡುವಂತಾಯಿತು.

ಕೊಡಸೋಗೆ-ಕಂದೇಗಾಲ ಗ್ರಾಮದ ರಸ್ತೆಯು ಭಾರಿ ಮಳೆಯಿಂದಾಗಿ ಹೊಳೆಯಂತಾಗಿತು. ಮಳೆಯ ನೀರಿನ ರಭಸಕ್ಕೆ ಕಸ- ಕಡ್ಡಿ ತ್ಯಾಜ್ಯಗಳನ್ನು ಹೊತ್ತು ತಂದು ಗ್ರಾಮಕ್ಕೆ ಬಿಟ್ಟಿದೆ. ಮಳೆಯ ನೀರು ಸಿದ್ದಪ್ಪಾಜಿ ದೇವಸ್ಥಾನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು, ಟಿವಿ, ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಗ್ರಾಮದ ಕೆಲವು ಜಮೀನುಗಳಲ್ಲಿ ಬಾಳೆಗಿಡ, ವಿವಿಧ ಫಸಲುಗಳು ನಾಶಗೊಂಡಿವೆ.

ಮತ್ತೆ ಮಳೆಯಾದರೆ ಆತಂಕ: ಗ್ರಾಮದ ಸಮೀಪವೇ ಪಾರ್ವತಿ ಬೆಟ್ಟ ಇರುವುದರಿಂದ ಬೆಟ್ಟದ ನೀರು ಇಳಿಜಾರಿಗೆ ಅನುಗುಣವಾಗಿ ಹರಿದುಕೊಂಡು ಬರುವುದರಿಂದ ಸಲೀಸಾಗಿ ಗ್ರಾಮದೊಳಗೆ ನುಗ್ಗುತ್ತಿದೆ. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮತ್ತೆ ಮಳೆ ಬಂದರೆ ಜನರು, ರೈತರಲ್ಲಿ ಒಂದು ಕಡೆ ಖುಷಿಯಾದರೆ, ಮತ್ತೊಂದು ಕಡೆ ಎಲ್ಲಿ ಮನೆಗೆ ನೀರು ನುಗ್ಗುವುದೋ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚರಂಡಿ ಹೂಳು ತೆಗೆಸಲು ಮನವಿ: ಪಾರ್ವತಿ ಬೆಟ್ಟದ ನೀರು ಗ್ರಾಮಕ್ಕೆ ಹರಿದು ಬರುವುದರಿಂದ ಬೆಟ್ಟದ ರಸ್ತೆ ಬದಿಯಲ್ಲಿ ಚರಂಡಿಯನ್ನು ನಿರ್ಮಿಸುವುದರಿಂದ ನೀರು ಗ್ರಾಮದೊಳಗೆ ನುಗ್ಗದಂತೆ ತಡೆಯಬಹುದಾಗಿದೆ. ಹಾಗೆಯೇ ಕಂದೇಗಾಲ- ಕೊಡಿಸೋಗೆ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿಯನ್ನು ಮತ್ತಷ್ಟು ಆಳಕ್ಕೆ ಇಳಿಸಿ ನೀರು ಸಲೀಸಾಗಿ ಕೆರೆ-ಕಟ್ಟೆಗಳಿಗೆ ತಲುಪುವಂತೆ ಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಮಳೆಯ ನೀರು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸುರೇಶ್‌ ಆರ್‌ ಕಂದೇಗಾಲ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದವನಾದ ನಾನು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿಎ, ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಮಾಡಿದ್ದೇನೆ. ಇದರ ಜೊತೆಗೆ ಭಾರತೀಯ ಭಾಷಾ ಸಂಸ್ಥಾನದಲ್ಲಿ ಒಂದು ವರ್ಷದ ಮಲಯಾಳಂ ಭಾಷಾ ಅಧ್ಯಯನ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಡಿಪ್ಲೊಮೊ ತರಬೇತಿ ಪಡೆದಿದ್ದೇನೆ. ವಿವಿಧ ದಿನಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿವುಳ್ಳ ಹಲವಾರು ಲೇಖನಗಳನ್ನು ಬರೆದಿದ್ದೇನೆ. ಕಳೆದ 5 ವರ್ಷಗಳಿಂದ ಮೈಸೂರಿನ ಪ್ರತಿಷ್ಠಿತ ʼಆಂದೋಲನʼ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ, ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಹಾಡುಗಾರಿಕೆ, ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್ ನೆಚ್ಚಿನ ಕ್ರೀಡೆಯಾಗಿದೆ.

Recent Posts

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

9 mins ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

46 mins ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

2 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

2 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

2 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

3 hours ago