ಚಾಮರಾಜನಗರ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ಚರಂಡಿ ನೀರು; ದ್ವೀಪದಂತಾದ ಕಂದೇಗಾಲ ಗ್ರಾಮ

ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.

ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ ಸಮುದಾಯದ ಬೀದಿಗಳಲ್ಲಿ ನಿರ್ಮಿಸಿರುವ ಚರಂಡಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ರಾತ್ರಿ ಇಡೀ ಕುಟುಂಬಗಳು ಜಾಗರಣೆ ಮಾಡಿ, ನೀರನ್ನು ಹೊರ ತೆಗೆಯುವಲ್ಲಿ ಹರ ಸಾಹಸ ಪಟ್ಟವು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಇಡೀ ಕುಟುಂಬಗಳು ಜಾಗರಣೆ ಮಾಡುವಂತಾಯಿತು.

ಕೊಡಸೋಗೆ-ಕಂದೇಗಾಲ ಗ್ರಾಮದ ರಸ್ತೆಯು ಭಾರಿ ಮಳೆಯಿಂದಾಗಿ ಹೊಳೆಯಂತಾಗಿತು. ಮಳೆಯ ನೀರಿನ ರಭಸಕ್ಕೆ ಕಸ- ಕಡ್ಡಿ ತ್ಯಾಜ್ಯಗಳನ್ನು ಹೊತ್ತು ತಂದು ಗ್ರಾಮಕ್ಕೆ ಬಿಟ್ಟಿದೆ. ಮಳೆಯ ನೀರು ಸಿದ್ದಪ್ಪಾಜಿ ದೇವಸ್ಥಾನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು, ಟಿವಿ, ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಗ್ರಾಮದ ಕೆಲವು ಜಮೀನುಗಳಲ್ಲಿ ಬಾಳೆಗಿಡ, ವಿವಿಧ ಫಸಲುಗಳು ನಾಶಗೊಂಡಿವೆ.

ಮತ್ತೆ ಮಳೆಯಾದರೆ ಆತಂಕ: ಗ್ರಾಮದ ಸಮೀಪವೇ ಪಾರ್ವತಿ ಬೆಟ್ಟ ಇರುವುದರಿಂದ ಬೆಟ್ಟದ ನೀರು ಇಳಿಜಾರಿಗೆ ಅನುಗುಣವಾಗಿ ಹರಿದುಕೊಂಡು ಬರುವುದರಿಂದ ಸಲೀಸಾಗಿ ಗ್ರಾಮದೊಳಗೆ ನುಗ್ಗುತ್ತಿದೆ. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮತ್ತೆ ಮಳೆ ಬಂದರೆ ಜನರು, ರೈತರಲ್ಲಿ ಒಂದು ಕಡೆ ಖುಷಿಯಾದರೆ, ಮತ್ತೊಂದು ಕಡೆ ಎಲ್ಲಿ ಮನೆಗೆ ನೀರು ನುಗ್ಗುವುದೋ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚರಂಡಿ ಹೂಳು ತೆಗೆಸಲು ಮನವಿ: ಪಾರ್ವತಿ ಬೆಟ್ಟದ ನೀರು ಗ್ರಾಮಕ್ಕೆ ಹರಿದು ಬರುವುದರಿಂದ ಬೆಟ್ಟದ ರಸ್ತೆ ಬದಿಯಲ್ಲಿ ಚರಂಡಿಯನ್ನು ನಿರ್ಮಿಸುವುದರಿಂದ ನೀರು ಗ್ರಾಮದೊಳಗೆ ನುಗ್ಗದಂತೆ ತಡೆಯಬಹುದಾಗಿದೆ. ಹಾಗೆಯೇ ಕಂದೇಗಾಲ- ಕೊಡಿಸೋಗೆ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿಯನ್ನು ಮತ್ತಷ್ಟು ಆಳಕ್ಕೆ ಇಳಿಸಿ ನೀರು ಸಲೀಸಾಗಿ ಕೆರೆ-ಕಟ್ಟೆಗಳಿಗೆ ತಲುಪುವಂತೆ ಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಮಳೆಯ ನೀರು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸುರೇಶ್‌ ಆರ್‌ ಕಂದೇಗಾಲ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದವನಾದ ನಾನು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿಎ, ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಮಾಡಿದ್ದೇನೆ. ಇದರ ಜೊತೆಗೆ ಭಾರತೀಯ ಭಾಷಾ ಸಂಸ್ಥಾನದಲ್ಲಿ ಒಂದು ವರ್ಷದ ಮಲಯಾಳಂ ಭಾಷಾ ಅಧ್ಯಯನ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಡಿಪ್ಲೊಮೊ ತರಬೇತಿ ಪಡೆದಿದ್ದೇನೆ. ವಿವಿಧ ದಿನಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿವುಳ್ಳ ಹಲವಾರು ಲೇಖನಗಳನ್ನು ಬರೆದಿದ್ದೇನೆ. ಕಳೆದ 5 ವರ್ಷಗಳಿಂದ ಮೈಸೂರಿನ ಪ್ರತಿಷ್ಠಿತ ʼಆಂದೋಲನʼ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ, ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಹಾಡುಗಾರಿಕೆ, ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್ ನೆಚ್ಚಿನ ಕ್ರೀಡೆಯಾಗಿದೆ.

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

1 hour ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

1 hour ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

1 hour ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

1 hour ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

14 hours ago