ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.
ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ ಸಮುದಾಯದ ಬೀದಿಗಳಲ್ಲಿ ನಿರ್ಮಿಸಿರುವ ಚರಂಡಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ರಾತ್ರಿ ಇಡೀ ಕುಟುಂಬಗಳು ಜಾಗರಣೆ ಮಾಡಿ, ನೀರನ್ನು ಹೊರ ತೆಗೆಯುವಲ್ಲಿ ಹರ ಸಾಹಸ ಪಟ್ಟವು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಇಡೀ ಕುಟುಂಬಗಳು ಜಾಗರಣೆ ಮಾಡುವಂತಾಯಿತು.
ಕೊಡಸೋಗೆ-ಕಂದೇಗಾಲ ಗ್ರಾಮದ ರಸ್ತೆಯು ಭಾರಿ ಮಳೆಯಿಂದಾಗಿ ಹೊಳೆಯಂತಾಗಿತು. ಮಳೆಯ ನೀರಿನ ರಭಸಕ್ಕೆ ಕಸ- ಕಡ್ಡಿ ತ್ಯಾಜ್ಯಗಳನ್ನು ಹೊತ್ತು ತಂದು ಗ್ರಾಮಕ್ಕೆ ಬಿಟ್ಟಿದೆ. ಮಳೆಯ ನೀರು ಸಿದ್ದಪ್ಪಾಜಿ ದೇವಸ್ಥಾನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು, ಟಿವಿ, ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಗ್ರಾಮದ ಕೆಲವು ಜಮೀನುಗಳಲ್ಲಿ ಬಾಳೆಗಿಡ, ವಿವಿಧ ಫಸಲುಗಳು ನಾಶಗೊಂಡಿವೆ.
ಮತ್ತೆ ಮಳೆಯಾದರೆ ಆತಂಕ: ಗ್ರಾಮದ ಸಮೀಪವೇ ಪಾರ್ವತಿ ಬೆಟ್ಟ ಇರುವುದರಿಂದ ಬೆಟ್ಟದ ನೀರು ಇಳಿಜಾರಿಗೆ ಅನುಗುಣವಾಗಿ ಹರಿದುಕೊಂಡು ಬರುವುದರಿಂದ ಸಲೀಸಾಗಿ ಗ್ರಾಮದೊಳಗೆ ನುಗ್ಗುತ್ತಿದೆ. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮತ್ತೆ ಮಳೆ ಬಂದರೆ ಜನರು, ರೈತರಲ್ಲಿ ಒಂದು ಕಡೆ ಖುಷಿಯಾದರೆ, ಮತ್ತೊಂದು ಕಡೆ ಎಲ್ಲಿ ಮನೆಗೆ ನೀರು ನುಗ್ಗುವುದೋ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಚರಂಡಿ ಹೂಳು ತೆಗೆಸಲು ಮನವಿ: ಪಾರ್ವತಿ ಬೆಟ್ಟದ ನೀರು ಗ್ರಾಮಕ್ಕೆ ಹರಿದು ಬರುವುದರಿಂದ ಬೆಟ್ಟದ ರಸ್ತೆ ಬದಿಯಲ್ಲಿ ಚರಂಡಿಯನ್ನು ನಿರ್ಮಿಸುವುದರಿಂದ ನೀರು ಗ್ರಾಮದೊಳಗೆ ನುಗ್ಗದಂತೆ ತಡೆಯಬಹುದಾಗಿದೆ. ಹಾಗೆಯೇ ಕಂದೇಗಾಲ- ಕೊಡಿಸೋಗೆ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿಯನ್ನು ಮತ್ತಷ್ಟು ಆಳಕ್ಕೆ ಇಳಿಸಿ ನೀರು ಸಲೀಸಾಗಿ ಕೆರೆ-ಕಟ್ಟೆಗಳಿಗೆ ತಲುಪುವಂತೆ ಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಮಳೆಯ ನೀರು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…
ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದಿದೆ ಎನ್ನಲಾದ ಎರಡು ಕೋಟಿ ರೂ.ಗಳಿಗೂ ಅಧಿಕ ಅನುದಾನ ದುರ್ಬಳಕೆಯ ಹಗರಣ ಕನ್ನಡಿಗರ ಸಾಂಸ್ಕೃತಿಕ ಅಸ್ಮಿತೆಗೆ…
ಪಂಚ ಗ್ಯಾರಂಟಿಗಳ ಪೈಕಿ ‘ಗೃಹಲಕ್ಷ್ಮಿ’, ‘ಗೃಹಜ್ಯೋತಿ’ ಯೋಜನೆಗಳು ದುರುಪಯೋಗ ಆಗುತ್ತಿವೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇವುಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿರುವುದು…