ಚಾಮರಾಜನಗರ

ಭಾರೀ ಮಳೆಗೆ ಮನೆಗಳಿಗೆ ನುಗ್ಗಿದ ಚರಂಡಿ ನೀರು; ದ್ವೀಪದಂತಾದ ಕಂದೇಗಾಲ ಗ್ರಾಮ

ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ.

ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ ಸಮುದಾಯದ ಬೀದಿಗಳಲ್ಲಿ ನಿರ್ಮಿಸಿರುವ ಚರಂಡಿಯ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ರಾತ್ರಿ ಇಡೀ ಕುಟುಂಬಗಳು ಜಾಗರಣೆ ಮಾಡಿ, ನೀರನ್ನು ಹೊರ ತೆಗೆಯುವಲ್ಲಿ ಹರ ಸಾಹಸ ಪಟ್ಟವು. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಇಡೀ ಕುಟುಂಬಗಳು ಜಾಗರಣೆ ಮಾಡುವಂತಾಯಿತು.

ಕೊಡಸೋಗೆ-ಕಂದೇಗಾಲ ಗ್ರಾಮದ ರಸ್ತೆಯು ಭಾರಿ ಮಳೆಯಿಂದಾಗಿ ಹೊಳೆಯಂತಾಗಿತು. ಮಳೆಯ ನೀರಿನ ರಭಸಕ್ಕೆ ಕಸ- ಕಡ್ಡಿ ತ್ಯಾಜ್ಯಗಳನ್ನು ಹೊತ್ತು ತಂದು ಗ್ರಾಮಕ್ಕೆ ಬಿಟ್ಟಿದೆ. ಮಳೆಯ ನೀರು ಸಿದ್ದಪ್ಪಾಜಿ ದೇವಸ್ಥಾನ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಮನೆಯಲ್ಲಿನ ದವಸ ಧಾನ್ಯಗಳು, ಟಿವಿ, ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ. ಗ್ರಾಮದ ಕೆಲವು ಜಮೀನುಗಳಲ್ಲಿ ಬಾಳೆಗಿಡ, ವಿವಿಧ ಫಸಲುಗಳು ನಾಶಗೊಂಡಿವೆ.

ಮತ್ತೆ ಮಳೆಯಾದರೆ ಆತಂಕ: ಗ್ರಾಮದ ಸಮೀಪವೇ ಪಾರ್ವತಿ ಬೆಟ್ಟ ಇರುವುದರಿಂದ ಬೆಟ್ಟದ ನೀರು ಇಳಿಜಾರಿಗೆ ಅನುಗುಣವಾಗಿ ಹರಿದುಕೊಂಡು ಬರುವುದರಿಂದ ಸಲೀಸಾಗಿ ಗ್ರಾಮದೊಳಗೆ ನುಗ್ಗುತ್ತಿದೆ. ಈಗಾಗಲೇ ಮಳೆಗಾಲ ಶುರುವಾಗಿರುವುದರಿಂದ ಮತ್ತೆ ಮಳೆ ಬಂದರೆ ಜನರು, ರೈತರಲ್ಲಿ ಒಂದು ಕಡೆ ಖುಷಿಯಾದರೆ, ಮತ್ತೊಂದು ಕಡೆ ಎಲ್ಲಿ ಮನೆಗೆ ನೀರು ನುಗ್ಗುವುದೋ ಎಂಬ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಚರಂಡಿ ಹೂಳು ತೆಗೆಸಲು ಮನವಿ: ಪಾರ್ವತಿ ಬೆಟ್ಟದ ನೀರು ಗ್ರಾಮಕ್ಕೆ ಹರಿದು ಬರುವುದರಿಂದ ಬೆಟ್ಟದ ರಸ್ತೆ ಬದಿಯಲ್ಲಿ ಚರಂಡಿಯನ್ನು ನಿರ್ಮಿಸುವುದರಿಂದ ನೀರು ಗ್ರಾಮದೊಳಗೆ ನುಗ್ಗದಂತೆ ತಡೆಯಬಹುದಾಗಿದೆ. ಹಾಗೆಯೇ ಕಂದೇಗಾಲ- ಕೊಡಿಸೋಗೆ ಮುಖ್ಯರಸ್ತೆ ಬದಿಯಲ್ಲಿರುವ ಚರಂಡಿಯನ್ನು ಮತ್ತಷ್ಟು ಆಳಕ್ಕೆ ಇಳಿಸಿ ನೀರು ಸಲೀಸಾಗಿ ಕೆರೆ-ಕಟ್ಟೆಗಳಿಗೆ ತಲುಪುವಂತೆ ಮಾಡಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿಧಿಗಳು ಇತ್ತ ಗಮನಹರಿಸಿ, ಮಳೆಯ ನೀರು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಸುರೇಶ್‌ ಆರ್‌ ಕಂದೇಗಾಲ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದವನಾದ ನಾನು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿಎ, ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಮಾಡಿದ್ದೇನೆ. ಇದರ ಜೊತೆಗೆ ಭಾರತೀಯ ಭಾಷಾ ಸಂಸ್ಥಾನದಲ್ಲಿ ಒಂದು ವರ್ಷದ ಮಲಯಾಳಂ ಭಾಷಾ ಅಧ್ಯಯನ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಡಿಪ್ಲೊಮೊ ತರಬೇತಿ ಪಡೆದಿದ್ದೇನೆ. ವಿವಿಧ ದಿನಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿವುಳ್ಳ ಹಲವಾರು ಲೇಖನಗಳನ್ನು ಬರೆದಿದ್ದೇನೆ. ಕಳೆದ 5 ವರ್ಷಗಳಿಂದ ಮೈಸೂರಿನ ಪ್ರತಿಷ್ಠಿತ ʼಆಂದೋಲನʼ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ, ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಹಾಡುಗಾರಿಕೆ, ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್ ನೆಚ್ಚಿನ ಕ್ರೀಡೆಯಾಗಿದೆ.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago