ಚಾಮರಾಜನಗರ

ಹನೂರಿನ ಮೊರಾರ್ಜಿ ದೇಸಾಯಿ ಮಾದರಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಹನೂರು : ನನ್ನ ವೈಯಕ್ತಿಕ ಜೀವನದಲ್ಲಿ ಇದೊಂದು ಅಮೋಘ ದಿನವಾಗಲಿದೆ ಇಂತಹ ವಿದ್ಯಾರ್ಥಿಗಳನ್ನು ಪಡೆದ ನಾವೇ ಧನ್ಯರು ಎಂದು ನಂಜನಗೂಡು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸೋಮಶೇಖರ್ ಹೇಳಿದರು.

ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ 2007ರ ಮೊದಲ ಎಸ್ಎಸ್ಎಲ್ಸಿ ಬ್ಯಾಚ್ ವತಿಯಿಂದ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದ ಆ ದಿನಗಳಲ್ಲಿ ನಮ್ಮ ವಿದ್ಯಾರ್ಥಿಗಳು ಪಟ್ಟಂತಹ ಕಷ್ಟ ಅಷ್ಟಿಷ್ಟಲ್ಲ. ಆ ದಿನಗಳು ಅತ್ಯಂತ ಕಷ್ಟ ಪಟ್ಟು ಈ ದಿನ ತಮ್ಮ ಕಾಲ ಮೇಲೆ ನಿಂತು. ನಮ್ಮನ್ನು ಸಹ ಗೌರವಿಸುವ ಕಾರ್ಯಕ್ರಮ ಮಾನವೀಯತೆ ಬೆಳೆಸಿಕೊಂಡಿದ್ದು ನಿಜಕ್ಕೂ ಸಂತೋಷದ ವಿಚಾರ ಎಂದರು.

ಶಿಕ್ಷಕ ಚಂದ್ರಶೇಖರ್ ಮೂರ್ತಿ ಮಾತನಾಡಿ, ಮೊರಾರ್ಜಿ ಶಾಲೆ ಪ್ರಾರಂಭದ ಅವಧಿಯಲ್ಲಿ ಸಾಕಷ್ಟು ಸೌಲಭ್ಯ ಕೊರತೆ ಇದ್ದರು ಸಹ ನಮ್ಮ ಮೊದಲ ಬ್ಯಾಚ್ ಮಕ್ಕಳು ಯಶಸ್ವಿ ಫಲಿತಾಂಶ ಕೊಟ್ಟರು ಜೊತೆಗೆ ಒಳ್ಳೆಯ ಗುಣ ಸಂಸ್ಕಾರ ಕಲಿತು ಇಂದು ನಮ್ಮನ್ನು ಗೌರವಿಸುವ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಅಭೂತ ಪೂರ್ವ ಹೂವಿನ ಸುರಿಮಳೆ : ಮೊದಲ ಬ್ಯಾಚ್ ನ ಮಕ್ಕಳು ತಮ್ಮ ಅವಧಿಯಲ್ಲಿ ತಮಗೆ ವಿದ್ಯಾದಾನ ಮಾಡಿದ ಹಾಗೂ ಅನ್ನದಾತರನ್ನು ಹೂವಿನ ಸುರಿಮಳೆ ಸುರಿಸುವ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಕರೆತಂದರು ಅಲ್ಲದೇ ಪ್ರಸ್ತುತ ಓದುತ್ತಿರುವ ಮಕ್ಕಳ ಬ್ಯಾoಡ್ ಸಹ ಅತ್ಯಂತ ರಮಣೀಯವಾಗಿತ್ತು.

ಭಾವುಕರಾದ ಶಿಕ್ಷಕರು ವಿದ್ಯಾರ್ಥಿಗಳು : ಹನೂರಿನಲ್ಲೇ ಮೊಟ್ಟ ಮೊದಲ ಬಾರಿಗೆ ಪ್ರಾರಂಭವಾದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಮೊದಲ ಬ್ಯಾಚ್ ಮಕ್ಕಳು ಸುಮಾರು 18 ವರ್ಷಗಳ ನಂತರ ಮೊದಲ ಕಾರ್ಯಕ್ರಮ ಮಾಡುತ್ತಿದ್ದೂ ಎಲ್ಲರೂ ಮಾತನಾಡುವಾಗ ಭಾವುಕರಾದಂತಹ ಪ್ರಸಂಗ ಸಹ ಜರುಗಿತು. ಜೊತೆಗೆ ಹಳೆಯ ನೆನಪುಗಳನ್ನು ಮೆಲುಕು ಹಾಕಿ ಖುಷಿ ದುಃಖ ಹಂಚಿಕೊಂಡರು.

ಸನ್ಮಾನ ಕಾರ್ಯಕ್ರಮ : ಇಲ್ಲಿ ವಿಶೇಷ ವಾಗಿ ಪಾಠ ಪ್ರವಚನ ಮಾಡಿದ ಶಿಕ್ಷಕರ ಜೊತೆಯಲ್ಲಿ ಅಡುಗೆ ಸಿಬ್ಬಂದಿಗಳಿಗೂ ಸಹ ವಿಶೇಷವಾಗಿ ಸನ್ಮಾನ ಮಾಡಿ ಗುರುಗಳು ಹಾಗೂ ಅಡುಗೆ ಸಿಬ್ಬಂದಿಗಳನ್ನು ಹಳೆಯ ವಿದ್ಯಾರ್ಥಿಗಳು ನೆನೆದರು.

ಇದೆ ಸಂದರ್ಭದಲ್ಲಿ ಎಲ್ಲೂ ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾರಂಭದ ದಿನಗಳಲ್ಲಿ ಇದ್ದಂತಹ ಶಿಕ್ಷಕರಾದ ಸತೀಶ್, ಚಂದ್ರು ಶೇಖರ್ ಮೂರ್ತಿ, ನೇತ್ರಾವತಿ, ಸೋಮಶೇಖರ್, ಮರಯ್ಯ, ಸುರೇಶ್, ಭಾಗ್ಯ, ಚಿಕ್ಕಸ್ವಾಮಿ,ಹಾಗೂ ಪ್ರಸ್ತುತ ಮೊರಾರ್ಜಿ ಶಾಲೆಯ ಪ್ರಾoಶುಪಾಲರಾದ ಪ್ರಕಾಶ್ ನಾಥನ್ ಹಾಗೂ ನಿಲಯ ಪಾಲಕ ಸೋಮಶೇಖರ್, ಶಿಕ್ಷಕರ ಬಳಗ ಹಾಗೂ ಎಲ್ಲ ಹಳೆಯ ವಿದ್ಯಾರ್ಥಿ ವಿದ್ಯಾರ್ಥಿ ನಿಯರು, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಒಂದು ದೇಶ, ಒಂದು ಚುನಾವಣೆ ವ್ಯವಸ್ಥೆಗೆ ಸ್ವಾಗತ, ಮೋದಿಯವರ ಭಯದಿಂದ ಈ ಕ್ರಮ ವಿರೋಧಿಸುತ್ತಿರುವ ಕಾಂಗ್ರೆಸ್‌: ಆರ್‌.ಅಶೋಕ

ರಾಹುಲ್‌ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…

5 hours ago

ರೀಲ್ಸ್‌ ಪ್ರಿಯರಿಗೆ ಭರ್ಜರಿ ಆಫರ್:‌ ರೀಲ್ಸ್ ಟ್ಯಾಗ್ ಮಾಡಿ ಬಹುಮಾನ ಗೆಲ್ಲಿ

ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್‌ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…

5 hours ago

ʻಕಾಟೇರʼನಿಗೆ ಕೋಳ ಬಿದ್ದು 100 ದಿನ: ಇಲ್ಲಿಯವರೆಗೆ ಏನೆಲ್ಲ ಆಯ್ತು? ಇಲ್ಲಿದೆ ಕಂಪ್ಲಿಟ್‌ ಡೀಟೆಲ್ಸ್…‌

ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…

6 hours ago

ಕೃಷಿ ತಂತ್ರಜ್ಞಾನ ವರ್ಗಾವಣೆ ರಾಜ್ಯ ಸರ್ಕಾರದ ಆದ್ಯತೆ: ಎನ್ ಚಲುವರಾಯಸ್ವಾಮಿ

ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…

7 hours ago

ದಸರಾ ಚಲನಚಿತ್ರೋತ್ಸವ: ಕಿರುಚಿತ್ರ ಪ್ರದರ್ಶನ

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…

7 hours ago

ಮೈಸೂರು: ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಒತ್ತಾಯ

ಮೈಸೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…

8 hours ago