ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ ರಸ್ತೆಯಲ್ಲಿನ ಗುಂಡಿಗಳನ್ನು ಗ್ರಾಮದ ಯುವಕನೋರ್ವ ವಿಡಿಯೋ ಮಾಡಿ ತನ್ನದೇ ಆದ ರೀತಿಯಲ್ಲಿ ವರ್ಣನೆ ಮಾಡಿ ಜನಪ್ರತಿನಿಧಿಗಳನ್ನು ಅಣಕಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ದೃಶ್ಯ ಭಾರಿ ಸದ್ದು ಮಾಡುತ್ತಿದೆ.
ಹನೂರು ತಾಲೂಕಿನ ಮಾರ್ಟಿಳ್ಳಿ ಗ್ರಾಮದ ನಿವಾಸಿ ಸ್ಯಾಮ್ಯುಯೆಲ್ ಎಂಬ ಯುವಕ ತನ್ನ ಗ್ರಾಮದ ಮುಖ್ಯರಸ್ತೆಯಲ್ಲಿರುವ ಆಳೆತ್ತರದ ಗುಂಡಿಗಳನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಬಾರಿ ವೈರಲ್ ಆಗುತ್ತಿದೆ.
ವಿಡಿಯೋನಲ್ಲಿ ನೋಡಿ ಆತ್ಮೀಯ ಗೆಳೆಯರೇ ಇದು ಯಾವ ಕೆರೆ ಅಂದುಕೊಂಡಿದ್ದೀರಾ ಇದು ನಮ್ಮ ಊರಿನ ದೊಡ್ಡ ದೊಡ್ಡ ಕೆರೆ ಕಳೆದ ಒಂದು ವರದಿಂದ ಬೀಳುತ್ತಿರುವ ಭಾರಿ ಮಳೆಗೆ ಕೆರೆಗಳೆಲ್ಲ ತುಂಬಿಹೋಗಿದೆ. ಇದರಿಂದ ನಮಗೆ ಸಂತೋಷವಾಗಿದೆ. ಹಲವಾರು ವರ್ಷಗಳಿಂದ ನಮ್ಮ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿತ್ತು ಇದೀಗ ಕೆರೆ ತುಂಬಿರುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತಿದೆ ಕುಡಿಯುವ ನೀರಿನ ಸಮಸ್ಯೆ ಬರುವುದಿಲ್ಲ ಅನ್ನಿಸುತ್ತಿದೆ. ಕೆರೆಯ ನೋಡಲು ತುಂಬಾ ಚೆನ್ನಾಗಿ ಇದೆಯಲ್ಲವಾ, ನಮ್ಮ ಊರಿನ ರಸ್ತೆಯಲ್ಲಿ ಹಲವಾರು ಕೆರೆಗಳಿದೆ ಕೆರೆಗಳೆಲ್ಲ ತುಂಬಿರುವುದರಿಂದ ರೈತರಿಗೂ ತುಂಬಾ ಸಂತೋಷವಾಗಿದೆ. ಅಂತರ್ಜಲ ಮಟ್ಟ ಹೆಚ್ಚಾಗಿರುವುದರಿಂದ ಉತ್ತಮ ಬೆಳೆಯಬಹುದು, ದ್ವಿಚಕ್ರ ವಾಹನ ಸವಾರರು ನಿಧನವಾಗಿ ಪ್ರಯಾಣ ಮಾಡಿ ಎಲ್ಲರೂ ವಿಡಿಯೋವನ್ನು ಬೇರೆಯವರಿಗೂ ಶೇರ್ ಮಾಡಿ ನಮ್ಮ ಕೆರೆಯನ್ನು ನೋಡಿ ಅವರು ಸಹ ಸಂತೋಷ ಕೊಡಲಿ ಎಂದು ವರ್ಣನೆ ಮಾಡಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಬಗ್ಗೆ ವ್ಯಂಗ್ಯ ಮಾಡಿದ್ದಾರೆ.
ಇದುವರೆಗೂ ಈ ವಿಡಿಯೋವನ್ನು ಎರಡು ಸಾವಿರ ಜನರು ವೀಕ್ಷಣೆ ಮಾಡಿದ್ದಾರೆ. ಏಳು ಜನರು ಶೇರ್ ಮಾಡಿದರೆ, 17ಕ್ಕೂ ಹೆಚ್ಚು ಜನರು ಈ ವಿಡಿಯೋಗೆ ವಿಭಿನ್ನ ರೀತಿ ಕಾಮೆಂಟ್ ಮಾಡಿದ್ದಾರೆ.
ಬಂಡಳ್ಳಿ ರಸ್ತೆ ಅದ್ಭುತ ರಸ್ತೆ
ಹನೂರು ತಾಲೂಕು ಕೇಂದ್ರ ಸ್ಥಾನದಿಂದ ಚಂಗವಾಡಿ, ಮಣಗಳ್ಳಿ, ಬಂಡಳ್ಳಿ ಶಾಗ್ಯ ಗ್ರಾಮದ ವರೆಗಿನ ರಸ್ತೆ ತುಂಬಾ ಹದಗಟ್ಟಿರುವುದರಿಂದ ಸದಾಶಿವಪ್ಪ ಬೆಟ್ಟಪ್ಪ ಬಂಡಳ್ಳಿ ಎಂಬುವವರು ಸಾಮಾಜಿಕ ಜಾಲತಾಣ ಮುಖಪುಟದಲ್ಲಿ ಕರುನಾಡು ಬಂಧುಗಳೇ ನಮ್ಮ ರಸ್ತೆ ಅದ್ಭುತ ರಸ್ತೆ ಹನೂರಿನಿಂದ ಶಾಗ್ಯ ಗ್ರಾಮದವರೆಗೆ ರಸ್ತೆಯಲ್ಲಿ ಉತ್ತಮ ತಳಿಯ ಭತ್ತ ಬೆಳೆಯಬಹುದು ಈಗಾಗಲೇ ಮಳೆ ಬಿದ್ದಿರುವುದರಿಂದ ನಾಟಿ ಮಾಡಲು ಸಿದ್ಧವಾಗಿದೆ. ಯಾವುದೇ ರೀತಿಯ ಗೊಬ್ಬರ ಬೇಕಿಲ್ಲ ಎಂದು ಗ್ರಾಮಸ್ಥರನ್ನು ಮಾತನಾಡಿಸಿ ವಿಡಿಯೋ ಹರಿಬಿಟ್ಟಿದ್ದಾರೆ.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…