ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ.
ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ನಾಗಪ್ಪ ಅವರಿಗೆ ಸೇರಿದ ಕರುವನ್ನು ತಡರಾತ್ರಿ ಚಿರತೆ ದಾಳಿ ನಡೆಸಿ ಕೊಂದು ತಿಂದು ಹಾಕಿದೆ.
ಕರುವಿನ ಮೇಲೆ ಚಿರತೆ ದಾಳಿ ಮಾಡಿರುವ ವಿಚಾರ ತಿಳಿಯುತ್ತಿದ್ದಂತೆ ವಲಯ ಅರಣ್ಯ ಅಽಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಚಿರತೆಯಿಂದ ದಾಳಿಗೊಳಗಾಗಿರುವ ಕರುವಿನ ಮಾಹಿತಿ ಪಡೆದು ಇಲಾಖೆಯ ಹಿರಿಯ ಅಽಕಾರಿಗಳ ಮಾರ್ಗದರ್ಶನದಲ್ಲಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ :-ಸ್ಫೋಟ | ಕೆಂಪುಕೋಟೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ
ಕಾಡುಹೊಲ ಗ್ರಾಮದಲ್ಲಿ ಚಿರತೆ ದಾಳಿಯಾಗಿದ್ದು, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಿಂದ ಬಂದಿರುವ ಚಿರತೆ ಗ್ರಾಮದ ಆಸುಪಾಸಿನಲ್ಲೇ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಚಿರತೆ ಭೀತಿಯಿಂದ ಸಂಜೆ ವೇಳೆ ತಿರುಗಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಶೀಘ್ರದಲ್ಲಿ ಚಿರತೆ ಸೆರೆ ಹಿಡಿಯಲು ಕ್ರಮ ವಹಿಸಬೇಕು. ಚಿರತೆ ಗ್ರಾಮದತ್ತ ಬಾರದಂತೆ ಕ್ರಮ ಕೈಗೊಳ್ಳಬೇಕು. ಮಾಲೀಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…