ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ತಾಲೂಕಿನ ಹುಣಸೆ ಪಾಳ್ಯ, ಮುನಿ ಗುಡಿದೊಡ್ಡಿ, ಕಾನುಮೇಳ ದೊಡ್ಡಿ,ಕರಿಯಪ್ಪನದೊಡ್ಡಿ ಗ್ರಾಮಸ್ಥರು ಮನವಿಯನ್ನು ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಗ್ರಾಮಸ್ಥರು ಕಾಡಾನೆಯೊಂದು ನಮ್ಮ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುವುದರ ಜೊತೆಗೆ ಕಳೆದ ಎರಡು ದಿನಗಳ ಹಿಂದೆ ರೈಲ್ವೆ ಬ್ಯಾರಿಕೆಡ್ ಸಹ ಮುರಿದು ಹಾಕಿದೆ.ಅಲ್ಲದೇ ತಡರಾತ್ರಿ ಮುನಿಗುಡಿ ದೊಡ್ಡಿ ಗ್ರಾಮದಲ್ಲಿ ಪ್ರಭುಸ್ವಾಮಿ ಎಂಬ ರೈತನ ಮೇಲೆ ದಾಳಿ ನಡೆಸಿ ರೈತ ಸಾವು ಬದುಕಿನ ನಡುವೆ ಹೋರಾಟ ಸಹ ನಡೆಸುತ್ತಿದ್ದಾರೆ. ಹಾಗಾಗಿ ರೈತರಿಗೆ ಸಂಕಷ್ಟವನ್ನು ತಂದು ಕೊಟ್ಟಿರುವಂತಹ ಕಾಡಾನೆ ಯನ್ನು ಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ನಾವೆಲ್ಲರೂ ಒಟ್ಟಾಗಿ ಮನವಿಯನ್ನು ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ರೀತಿ ಪರಿಣಾಮಗಳು ಉಂಟಾದಲ್ಲಿ ಅದಕ್ಕೆ ನೇರ ಹೊಣೆಗಾರರು ಅರಣ್ಯ ಇಲಾಖೆ ಹೊರಬೇಕಾಗುತ್ತದೆ. ಹಾಗಾಗಿ ಆದಷ್ಟು ಬೇಗ ಈ ಕೆಲಸವನ್ನು ಮುಗಿಸಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಮಾತನಾಡಿ ಗುರುವಾರ ಘಟನೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಪರಿಶೀಲನೆಗೆ ಆಗಮಿಸಲಿದ್ದಾರೆ. ಈ ವೇಳೆ ಅವರ ಗಮನಕ್ಕೆ ತಂದು ಇರುವ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ಗ್ರಾಮದ ಸದಾನಂದ ಸ್ವಾಮಿ, ರವಿ, ಚಿಕ್ಕಮಾದ, ಸತೀಶ್, ಸೇರಿದಂತೆ ಸಾಕಷ್ಟು ರೈತರು ಭಾಗವಹಿಸಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…