ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ತಾಲೂಕಿನ ಹುಣಸೆ ಪಾಳ್ಯ, ಮುನಿ ಗುಡಿದೊಡ್ಡಿ, ಕಾನುಮೇಳ ದೊಡ್ಡಿ,ಕರಿಯಪ್ಪನದೊಡ್ಡಿ ಗ್ರಾಮಸ್ಥರು ಮನವಿಯನ್ನು ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಗ್ರಾಮಸ್ಥರು ಕಾಡಾನೆಯೊಂದು ನಮ್ಮ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುವುದರ ಜೊತೆಗೆ ಕಳೆದ ಎರಡು ದಿನಗಳ ಹಿಂದೆ ರೈಲ್ವೆ ಬ್ಯಾರಿಕೆಡ್ ಸಹ ಮುರಿದು ಹಾಕಿದೆ.ಅಲ್ಲದೇ ತಡರಾತ್ರಿ ಮುನಿಗುಡಿ ದೊಡ್ಡಿ ಗ್ರಾಮದಲ್ಲಿ ಪ್ರಭುಸ್ವಾಮಿ ಎಂಬ ರೈತನ ಮೇಲೆ ದಾಳಿ ನಡೆಸಿ ರೈತ ಸಾವು ಬದುಕಿನ ನಡುವೆ ಹೋರಾಟ ಸಹ ನಡೆಸುತ್ತಿದ್ದಾರೆ. ಹಾಗಾಗಿ ರೈತರಿಗೆ ಸಂಕಷ್ಟವನ್ನು ತಂದು ಕೊಟ್ಟಿರುವಂತಹ ಕಾಡಾನೆ ಯನ್ನು ಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ನಾವೆಲ್ಲರೂ ಒಟ್ಟಾಗಿ ಮನವಿಯನ್ನು ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ರೀತಿ ಪರಿಣಾಮಗಳು ಉಂಟಾದಲ್ಲಿ ಅದಕ್ಕೆ ನೇರ ಹೊಣೆಗಾರರು ಅರಣ್ಯ ಇಲಾಖೆ ಹೊರಬೇಕಾಗುತ್ತದೆ. ಹಾಗಾಗಿ ಆದಷ್ಟು ಬೇಗ ಈ ಕೆಲಸವನ್ನು ಮುಗಿಸಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಮಾತನಾಡಿ ಗುರುವಾರ ಘಟನೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಪರಿಶೀಲನೆಗೆ ಆಗಮಿಸಲಿದ್ದಾರೆ. ಈ ವೇಳೆ ಅವರ ಗಮನಕ್ಕೆ ತಂದು ಇರುವ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ಗ್ರಾಮದ ಸದಾನಂದ ಸ್ವಾಮಿ, ರವಿ, ಚಿಕ್ಕಮಾದ, ಸತೀಶ್, ಸೇರಿದಂತೆ ಸಾಕಷ್ಟು ರೈತರು ಭಾಗವಹಿಸಿದ್ದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…