ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ತಾಲೂಕಿನ ಹುಣಸೆ ಪಾಳ್ಯ, ಮುನಿ ಗುಡಿದೊಡ್ಡಿ, ಕಾನುಮೇಳ ದೊಡ್ಡಿ,ಕರಿಯಪ್ಪನದೊಡ್ಡಿ ಗ್ರಾಮಸ್ಥರು ಮನವಿಯನ್ನು ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಗ್ರಾಮಸ್ಥರು ಕಾಡಾನೆಯೊಂದು ನಮ್ಮ ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುವುದರ ಜೊತೆಗೆ ಕಳೆದ ಎರಡು ದಿನಗಳ ಹಿಂದೆ ರೈಲ್ವೆ ಬ್ಯಾರಿಕೆಡ್ ಸಹ ಮುರಿದು ಹಾಕಿದೆ.ಅಲ್ಲದೇ ತಡರಾತ್ರಿ ಮುನಿಗುಡಿ ದೊಡ್ಡಿ ಗ್ರಾಮದಲ್ಲಿ ಪ್ರಭುಸ್ವಾಮಿ ಎಂಬ ರೈತನ ಮೇಲೆ ದಾಳಿ ನಡೆಸಿ ರೈತ ಸಾವು ಬದುಕಿನ ನಡುವೆ ಹೋರಾಟ ಸಹ ನಡೆಸುತ್ತಿದ್ದಾರೆ. ಹಾಗಾಗಿ ರೈತರಿಗೆ ಸಂಕಷ್ಟವನ್ನು ತಂದು ಕೊಟ್ಟಿರುವಂತಹ ಕಾಡಾನೆ ಯನ್ನು ಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ನಾವೆಲ್ಲರೂ ಒಟ್ಟಾಗಿ ಮನವಿಯನ್ನು ಸಲ್ಲಿಸಿದ್ದೇವೆ. ಮುಂದಿನ ದಿನಗಳಲ್ಲಿ ಬೇರೆ ರೀತಿ ಪರಿಣಾಮಗಳು ಉಂಟಾದಲ್ಲಿ ಅದಕ್ಕೆ ನೇರ ಹೊಣೆಗಾರರು ಅರಣ್ಯ ಇಲಾಖೆ ಹೊರಬೇಕಾಗುತ್ತದೆ. ಹಾಗಾಗಿ ಆದಷ್ಟು ಬೇಗ ಈ ಕೆಲಸವನ್ನು ಮುಗಿಸಿ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.
ಬೈಲೂರು ವಲಯ ಅರಣ್ಯ ಅಧಿಕಾರಿ ಪ್ರಮೋದ್ ಮಾತನಾಡಿ ಗುರುವಾರ ಘಟನೆ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಪರಿಶೀಲನೆಗೆ ಆಗಮಿಸಲಿದ್ದಾರೆ. ಈ ವೇಳೆ ಅವರ ಗಮನಕ್ಕೆ ತಂದು ಇರುವ ಸಮಸ್ಯೆಯನ್ನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ಗ್ರಾಮದ ಸದಾನಂದ ಸ್ವಾಮಿ, ರವಿ, ಚಿಕ್ಕಮಾದ, ಸತೀಶ್, ಸೇರಿದಂತೆ ಸಾಕಷ್ಟು ರೈತರು ಭಾಗವಹಿಸಿದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…