ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ಜರುಗಿದೆ.
ಅಸ್ತೂರು ಗ್ರಾಮದ ಕೋಟೆ ಬಸಪ್ಪ ಎಂಬವರು ತಮ್ಮ ಜಮೀನಿನಲ್ಲಿ ಕಷ್ಟಪಟ್ಟು ಸಾಲ ಮಾಡಿ ಮಾವು ತೆಂಗು ಅಡಿಕೆ ಬಾಳೆ ಬೆಳೆಯನ್ನು ಬೆಳೆಸಿದ್ದರು. ಹಿರಿಯ ವಯಸ್ಸಿನಲ್ಲಿಯೂ ಮಾದರಿ ರೈತರಾಗಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಕಾಡಾನೆಗಳು ದಾಳಿ ನಡೆಸಿ ನಾಶಪಡಿಸಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ವ್ಯವಸಾಯವನ್ನೇ ನಂಬಿ ಜೀವನ ನಡೆಸುತ್ತಿದ್ದ ಕೋಟೆಬಸಪ್ಪ ಅವರು ಬೆಳೆ ನಾಶದಿಂದ ಸಂಕಷ್ಟಕ್ಕೀಡಾಗಿದ್ದಾರೆ.
ಸೂಕ್ತ ಪರಿಹಾರಕ್ಕೆ ಆಗ್ರಹ
ಕಾಡಾನೆಗಳ ದಾಳಿಯಿಂದ ಬಾಳೆ ಮಾವು ತೆಂಗು ಅಡಿಕೆ ಮರಗಳು ಸಂಪೂರ್ಣ ನಾಶವಾಗಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಮಹಜರ್ ನಡೆಸಿ ಅತಿ ಶೀಘ್ರದಲ್ಲಿ ನೊಂದ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರು ಮನವಿ ಮಾಡಿದ್ದಾರೆ.
ಈಗಾಗಲೇ ಹಲವು ತಿಂಗಳಿನಿಂದ ಚಿರತೆ ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ರೈತರು ಸಾಕಿರುವ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ.
ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಯಾವಾಗ?
ಹಲವಾರು ದಿನಗಳಿಂದ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದೆ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಮುಂದಿನ ದಿನಗಳಲ್ಲಿ ಮರುಕಳಿಸಿದರೆ ರೈತ ಸಂಘಟನೆಗಳು ಹಾಗೂ ಸ್ಥಳೀಯ ಕನ್ನಡ ಪರ ಸಂಘಟನೆಗಳು ರೈತರಿಗೆ ಬೆಂಬಲವಾಗಿ ನಿಂತು ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಮ್ಮ ಕನ್ನಡಿಗರ ವಿಜಯ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಪೊನ್ನಾಚಿ ಸ್ನೇಹಜೀವಿ ರಾಜು ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…