ಚಾಮರಾಜನಗರ

ಹನೂರು | ಕಾಡಾನೆ ದಾಳಿಗೆ ಫಸಲು ಹಾನಿ ; ಸೂಕ್ತ ಪರಿಹಾರಕ್ಕೆ ಆಗ್ರಹ

ಹನೂರು : ಕಾಡಾನೆ ದಾಳಿಗೆ ಹಲವಾರು ವರ್ಷಗಳಿಂದ ಪೋಷಣೆ ಮಾಡಿದ್ದ ತೆಂಗು, ಬಾಳೆ, ಮಾವು, ಅಡಿಕೆ ಬೆಳೆ ನಾಶವಾಗಿ ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿರುವ ಘಟನೆ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸ್ತೂರು ಗ್ರಾಮದಲ್ಲಿ ಜರುಗಿದೆ.

ಅಸ್ತೂರು ಗ್ರಾಮದ ಕೋಟೆ ಬಸಪ್ಪ ಎಂಬವರು ತಮ್ಮ ಜಮೀನಿನಲ್ಲಿ ಕಷ್ಟಪಟ್ಟು ಸಾಲ ಮಾಡಿ ಮಾವು ತೆಂಗು ಅಡಿಕೆ ಬಾಳೆ ಬೆಳೆಯನ್ನು ಬೆಳೆಸಿದ್ದರು. ಹಿರಿಯ ವಯಸ್ಸಿನಲ್ಲಿಯೂ ಮಾದರಿ ರೈತರಾಗಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ಕಾಡಾನೆಗಳು ದಾಳಿ ನಡೆಸಿ ನಾಶಪಡಿಸಿವೆ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ವ್ಯವಸಾಯವನ್ನೇ ನಂಬಿ ಜೀವನ ನಡೆಸುತ್ತಿದ್ದ ಕೋಟೆಬಸಪ್ಪ ಅವರು ಬೆಳೆ ನಾಶದಿಂದ ಸಂಕಷ್ಟಕ್ಕೀಡಾಗಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹ
ಕಾಡಾನೆಗಳ ದಾಳಿಯಿಂದ ಬಾಳೆ ಮಾವು ತೆಂಗು ಅಡಿಕೆ ಮರಗಳು ಸಂಪೂರ್ಣ ನಾಶವಾಗಿರುವುದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಮಹಜರ್ ನಡೆಸಿ ಅತಿ ಶೀಘ್ರದಲ್ಲಿ ನೊಂದ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ರೈತ ಮುಖಂಡರು ಮನವಿ ಮಾಡಿದ್ದಾರೆ.

ಈಗಾಗಲೇ ಹಲವು ತಿಂಗಳಿನಿಂದ ಚಿರತೆ ನಿರಂತರವಾಗಿ ದಾಳಿ ಮಾಡುತ್ತಿರುವುದರಿಂದ ರೈತರು ಸಾಕಿರುವ ಸಾಕು ಪ್ರಾಣಿಗಳನ್ನು ಬಲಿ ತೆಗೆದುಕೊಂಡಿದೆ.

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಯಾವಾಗ?
ಹಲವಾರು ದಿನಗಳಿಂದ ಕಾಡು ಪ್ರಾಣಿಗಳ ಹಾವಳಿ ಮಿತಿಮೀರಿದೆ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ವಹಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ, ಮುಂದಿನ ದಿನಗಳಲ್ಲಿ ಮರುಕಳಿಸಿದರೆ ರೈತ ಸಂಘಟನೆಗಳು ಹಾಗೂ ಸ್ಥಳೀಯ ಕನ್ನಡ ಪರ ಸಂಘಟನೆಗಳು ರೈತರಿಗೆ ಬೆಂಬಲವಾಗಿ ನಿಂತು ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ನಮ್ಮ ಕನ್ನಡಿಗರ ವಿಜಯ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಪೊನ್ನಾಚಿ ಸ್ನೇಹಜೀವಿ ರಾಜು ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

4 mins ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

17 mins ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

25 mins ago

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪತ್ರ…

37 mins ago

ತಂದೆ ಕೆಸಿಆರ್‌ಗೆ ಸೆಡ್ಡು: ಹೊಸ ಟಿಆರ್‌ಎಸ್‌ ಪಕ್ಷ ಸ್ಥಾಪಿಸಿದ ಕವಿತಾ

ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಮತ್ತು ಮಾಜಿ ಸಂಸದೆ ಕೆ.ಕವಿತಾ ತಮ್ಮ ಹೊಸ ರಾಜಕೀಯ…

55 mins ago

ಮದ್ದೂರು ಉತ್ಸವಕ್ಕೆ ವಿಧ್ಯುಕ್ತ ಚಾಲನೆ

ಮದ್ದೂರು : ಐತಿಹಾಸಿಕ ಮದ್ದೂರು ಉತ್ಸವ-2026ಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು…

56 mins ago