ಮಹಾದೇಶ್ ಎಂ. ಗೌಡ, ಹನೂರು
ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ.
ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು ನಾಲ್ಕು ಎಕರೆ ಜಮೀನಿನಲ್ಲಿ ಜೋಳ ಮತ್ತು ಬಾಳೆ ಬೆಳೆಗಳನ್ನು ಬೇಸಾಯ ಮಾಡಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಬಂದ ಕಾಡು ಪ್ರಾಣಿಗಳು ಜಮೀನಿನಲ್ಲಿ ಬೆಳೆದ ಬಾಳೆ ಮತ್ತು ಜೋಳವನ್ನು ತಿಂದು ತುಳಿದು ಹಾಳುಮಾಡಿವೆ.
ಅಲ್ಲದೇ, ಇತ್ತೀಚೆಗೆ ಅವರು ಬಿತ್ತನೆ ಮಾಡಿದ್ದ ಜೋಳದ ಫಸಲೂ ಪೈರು ಉತ್ತಮವಾಗಿ ಬಂದಿದೆ ಎಂದು ಸಂತಸದಲ್ಲಿದ್ದರೂ ಆದರೆ ಕಾಡು ಪ್ರಾಣಿಗಳ ದಾಳಿಯಿಂದ ಆ ಫಸಲೂಕೂಡ ಹಾನಿಯಾಗಿದ್ದು, ಸಾಲ ಮಾಡಿ ಬೆಳೆದ ಬೆಳೆಗಳು ಕೆಲವೇ ದಿನಗಳಲ್ಲಿ ನಾಶವಾಗಿವೆ ಎಂದು ಅವರು ತಮ್ಮ ಅಳಲು ತೊಡಿಕೊಂಡಿದ್ದಾರೆ.
ಅಧಿಕಾರಿಗಳು ಶೀಘ್ರವೆ ಹಾನಿಗೊಳಗಾದ ಫಸಲಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರೈತ ಲೋಕೇಶ್ ಒತ್ತಾಯಿಸಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…