ಚಾಮರಾಜನಗರ

ಹನೂರು: ಕಾಡು ಪ್ರಾಣಿಗಳ ದಾಳಿಗೆ ಬೆಳೆ ನಾಶ

ಮಹಾದೇಶ್ ಎಂ. ಗೌಡ, ಹನೂರು

ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ.

ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು ನಾಲ್ಕು ಎಕರೆ ಜಮೀನಿನಲ್ಲಿ ಜೋಳ ಮತ್ತು ಬಾಳೆ ಬೆಳೆಗಳನ್ನು ಬೇಸಾಯ ಮಾಡಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಬಂದ ಕಾಡು ಪ್ರಾಣಿಗಳು ಜಮೀನಿನಲ್ಲಿ ಬೆಳೆದ ಬಾಳೆ ಮತ್ತು ಜೋಳವನ್ನು ತಿಂದು ತುಳಿದು ಹಾಳುಮಾಡಿವೆ.

ಅಲ್ಲದೇ, ಇತ್ತೀಚೆಗೆ ಅವರು ಬಿತ್ತನೆ ಮಾಡಿದ್ದ ಜೋಳದ ಫಸಲೂ ಪೈರು ಉತ್ತಮವಾಗಿ ಬಂದಿದೆ ಎಂದು ಸಂತಸದಲ್ಲಿದ್ದರೂ ಆದರೆ ಕಾಡು ಪ್ರಾಣಿಗಳ ದಾಳಿಯಿಂದ ಆ ಫಸಲೂಕೂಡ ಹಾನಿಯಾಗಿದ್ದು, ಸಾಲ ಮಾಡಿ ಬೆಳೆದ ಬೆಳೆಗಳು ಕೆಲವೇ ದಿನಗಳಲ್ಲಿ ನಾಶವಾಗಿವೆ ಎಂದು ಅವರು ತಮ್ಮ ಅಳಲು ತೊಡಿಕೊಂಡಿದ್ದಾರೆ.

ಅಧಿಕಾರಿಗಳು ಶೀಘ್ರವೆ ಹಾನಿಗೊಳಗಾದ ಫಸಲಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರೈತ ಲೋಕೇಶ್ ಒತ್ತಾಯಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

2 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

13 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago