ಮಹಾದೇಶ್ ಎಂ. ಗೌಡ, ಹನೂರು
ಹನೂರು: ಪಟ್ಟಣದ ಹೊರವಲಯದ ಚಿಂಚಳ್ಳಿ ರಸ್ತೆ ಸಮೀಪದ ಜಮೀನಿಗೆ ಕಾಡು ಪ್ರಾಣಿಗಳು ದಾಳಿ ನಡೆಸಿ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಹಾಗೂ ಬಾಳೆ ಫಸಲು ನಾಶ ಮಾಡಿರುವ ಘಟನೆ ಜರುಗಿದೆ.
ಹನೂರು ಪಟ್ಟಣದ ರೈತ ಲೊಕೇಶ್ ಎಂಬುವವರು ನಾಲ್ಕು ಎಕರೆ ಜಮೀನಿನಲ್ಲಿ ಜೋಳ ಮತ್ತು ಬಾಳೆ ಬೆಳೆಗಳನ್ನು ಬೇಸಾಯ ಮಾಡಿದ್ದರು. ಆದರೆ ಸಮೀಪದ ಅರಣ್ಯ ಪ್ರದೇಶದಿಂದ ಬಂದ ಕಾಡು ಪ್ರಾಣಿಗಳು ಜಮೀನಿನಲ್ಲಿ ಬೆಳೆದ ಬಾಳೆ ಮತ್ತು ಜೋಳವನ್ನು ತಿಂದು ತುಳಿದು ಹಾಳುಮಾಡಿವೆ.
ಅಲ್ಲದೇ, ಇತ್ತೀಚೆಗೆ ಅವರು ಬಿತ್ತನೆ ಮಾಡಿದ್ದ ಜೋಳದ ಫಸಲೂ ಪೈರು ಉತ್ತಮವಾಗಿ ಬಂದಿದೆ ಎಂದು ಸಂತಸದಲ್ಲಿದ್ದರೂ ಆದರೆ ಕಾಡು ಪ್ರಾಣಿಗಳ ದಾಳಿಯಿಂದ ಆ ಫಸಲೂಕೂಡ ಹಾನಿಯಾಗಿದ್ದು, ಸಾಲ ಮಾಡಿ ಬೆಳೆದ ಬೆಳೆಗಳು ಕೆಲವೇ ದಿನಗಳಲ್ಲಿ ನಾಶವಾಗಿವೆ ಎಂದು ಅವರು ತಮ್ಮ ಅಳಲು ತೊಡಿಕೊಂಡಿದ್ದಾರೆ.
ಅಧಿಕಾರಿಗಳು ಶೀಘ್ರವೆ ಹಾನಿಗೊಳಗಾದ ಫಸಲಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರೈತ ಲೋಕೇಶ್ ಒತ್ತಾಯಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…