Mysore
32
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಹನೂರು : ಜಿಂಕೆ ಭೇಟೆ ; ಓರ್ವ ಬಂಧನ

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ಮಲೆಮಹದೇಶ್ವರ ವನ್ಯಧಾಮದ ಪಚ್ಚೆದೊಡ್ಡಿ ಗಸ್ತಿನ‌ ದಿನ್ನಳ್ಳಿ‌- ರಾಮಾಪುರ ಮಾರ್ಗ ಜಿಂಕೆಯೊಂದನ್ನು ಬೇಟೆಯಾಡಿ ಸಾಗಿಸುತ್ತಿರುವ ಖಚಿತ ಮಾಹಿತಿಯ
ಮೇರೆಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಕ್ರಪಾಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸ್ವಪ್ನಿಲ್ ಮನೋಹರ್ ಅಹಿರೇ, ಪರೀಕ್ಷಾರ್ಥ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮಾಪತಿ, ಹನೂರು ಬಪ್ಪರ್ ವಲಯದ ಆರ್ ಎಫ್ ಒ ಗಳಾದ ಪ್ರವೀಣ್ ಮಾರ್ಗದರ್ಶನಲ್ಲಿ ಡಿ ಆರ್ ಎಫ್ ನಂದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ‌ ನೆಡೆಸಿ ಸುರೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಿಬ್ಬರು ಆರೋಪಿಗಳಾದ ಗೋವಿಂದ,ಮೂರ್ತಿ ಎಂಬುವರು ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಆರೋಪಿ ಸುರೇಶ್, ಕೃತ್ಯಕ್ಕೆ ಬಳಸಿದ್ದ ಆಟೋ , ಜಿಂಕೆಯ ಮೃತ ದೇಹ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಚರಣೆಯಲ್ಲಿ ಡಿಆರ್ ಎಫ್ ಒ ನಂದೀಶ್, ಗಸ್ತು ಅರಣ್ಯ ಪಾಲಕರಾದ ಭೀಮಶಿ ಮುನ್ನಾಳ, ಅಶೋಕ್ ಎಸ್ ಕೂಗುವರ್, ಸುರೇಶ್ ಪಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

Tags:
error: Content is protected !!