ಚಾಮರಾಜನಗರ

ಹನೂರು : ಜಿಂಕೆ ಭೇಟೆ ; ಓರ್ವ ಬಂಧನ

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ಮಲೆಮಹದೇಶ್ವರ ವನ್ಯಧಾಮದ ಪಚ್ಚೆದೊಡ್ಡಿ ಗಸ್ತಿನ‌ ದಿನ್ನಳ್ಳಿ‌- ರಾಮಾಪುರ ಮಾರ್ಗ ಜಿಂಕೆಯೊಂದನ್ನು ಬೇಟೆಯಾಡಿ ಸಾಗಿಸುತ್ತಿರುವ ಖಚಿತ ಮಾಹಿತಿಯ
ಮೇರೆಗೆ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಕ್ರಪಾಣಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸ್ವಪ್ನಿಲ್ ಮನೋಹರ್ ಅಹಿರೇ, ಪರೀಕ್ಷಾರ್ಥ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮಾಪತಿ, ಹನೂರು ಬಪ್ಪರ್ ವಲಯದ ಆರ್ ಎಫ್ ಒ ಗಳಾದ ಪ್ರವೀಣ್ ಮಾರ್ಗದರ್ಶನಲ್ಲಿ ಡಿ ಆರ್ ಎಫ್ ನಂದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ದಾಳಿ‌ ನೆಡೆಸಿ ಸುರೇಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮತ್ತಿಬ್ಬರು ಆರೋಪಿಗಳಾದ ಗೋವಿಂದ,ಮೂರ್ತಿ ಎಂಬುವರು ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ವೇಳೆ ಆರೋಪಿ ಸುರೇಶ್, ಕೃತ್ಯಕ್ಕೆ ಬಳಸಿದ್ದ ಆಟೋ , ಜಿಂಕೆಯ ಮೃತ ದೇಹ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಈ ಕಾರ್ಯಚರಣೆಯಲ್ಲಿ ಡಿಆರ್ ಎಫ್ ಒ ನಂದೀಶ್, ಗಸ್ತು ಅರಣ್ಯ ಪಾಲಕರಾದ ಭೀಮಶಿ ಮುನ್ನಾಳ, ಅಶೋಕ್ ಎಸ್ ಕೂಗುವರ್, ಸುರೇಶ್ ಪಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

6 mins ago

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

10 mins ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago