ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ.
ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಎಂಟು ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದ್ದ ಗಂಡಾನೆಯ ಎರಡು ದಂತಗಳು ಪತ್ತೆಯಾಗಿತ್ತು.
ಇದಾದ ಎರಡೇ ದಿನಕ್ಕೆ ಆಗಸ್ಟ್ 30 ರಂದು ಬೈಲೂರು ವನ್ಯಜೀವಿ ವಲಯ ಪಿಜಿ ಪಾಳ್ಯ ಮಾವತ್ತೂರು ಶಾಖೆ ಬಿ ಗಸ್ತಿನಲ್ಲಿ ಸಿಬ್ಬಂದಿಗಳು ಗಸ್ತಿನಲ್ಲಿದ್ದಾಗ ಸುಮಾರು 60 ರಿಂದ 65 ವಯಸ್ಸಿನ ಹೆಣ್ಣಾನೆ ಮೃತಪಟ್ಟ ಎಂಟು ದಿನಗಳ ನಂತರ ಪತ್ತೇಯಾಗಿತ್ತು.
ಇದೀಗ ಸೆಪ್ಟೆಂಬರ್ 16ರಂದು ಬಿ.ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವುದು ಕಂಡುಬಂದಿದೆ. ಹೆಣ್ಣಾನೆ ಮೃತಪಟ್ಟಿರುವ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಿ ಆರ್ ಟಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಎಸಿಎಫ್ ಕೆ ಸುರೇಶ್, ಆರ್ ಎಫ್ ಒ ಪ್ರಮೋದ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅರಣ್ಯ ಇಲಾಖೆಯ ಪಶು ವೈದ್ಯಾಧಿಕಾರಿ ಡಾ. ವಾಸಿಂ ಮಿರ್ಜಾ ರವರು ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವನ್ಯ ಜೀವಿ ಪ್ರಿಯರಲ್ಲಿ ಆತಂಕ: ಬಿ ಆರ್ ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಳೆದ 20 ದಿನಗಳ ಅವಧಿಯಲ್ಲಿ ನಾಲ್ಕು ಆನೆಗಳು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಆನೆಗಳು ಸಾಲುಸಾಲಾಗಿ ಮೃತಪಡುತ್ತಿದ್ದರು ಸಂಬಂಧ ಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಬೇಕು ಇಲ್ಲದಿದ್ದರೆ ಇನ್ನಷ್ಟು ಆನೆಗಳು ಸಾಯುವುದರಲ್ಲಿ ಯಾವುದೇ ಅನುಮಾನವಿಲ್ಲ ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಮುಂದೆ ಆನೆಗಳು ಸಾಯದಂತೆ ಎಚ್ಚರ ವಹಿಸಬೇಕು ಎಂದು ವನ್ಯಜೀವಿ ಪ್ರಿಯರು ಒತ್ತಾಯಿಸಿದ್ದಾರೆ.
ಬೈಲೂರು ವನ್ಯಜೀವಿ ವಲಯದ ಪಿಜಿ ಪಾಳ್ಯ ಮಾವತ್ತೂರು ಎ ಮತ್ತು ಬಿ ಗಸ್ತಿನಲ್ಲಿ 15 ದಿನಗಳ ಅಂತರದಲ್ಲಿ ಎರಡು ಆನೆಗಳು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…