ಹನೂರು: ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ತಂದೆಯನ್ನೆ ಸ್ವಂತ ಮಗನೇ ಹೊಡೆದು ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತನನ್ನು ಗೋಪಿನಾಥಂ ಗ್ರಾಮದ ಶಂಕರನ್ (70) ಎಂದು ಗುರುತಿಸಲಾಗಿದೆ.
ಘಟನೆ ವಿವರ: ಎರಡು ದಿನಗಳ ಹಿಂದೆ ಶಂಕರನ್ ಮನೆಗೆ ಭಾರದ ಹಿನ್ನೆಲೆಯಲ್ಲಿ ಕುಟುಂಬದವರು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಗೆ ನಾಪತ್ತೆ ದೂರು ಸಲ್ಲಿಸಿದ್ದರು. ಶನಿವಾರ ಕಾವೇರಿ ನದಿಯಲ್ಲಿ ಶಂಕರನ್ ಅವರ ಮೃತದೇಹ ಪತ್ತೆಯಾಗಿದ್ದು,ಮೃತನ ಪತ್ನಿ ನಂತರ ಠಾಣೆಗೆ ಆಗಮಿಸಿ ನಮ್ಮ ಮಗ ಗೊವಿಂದರಾಜು ಜೊತೆ ಮೇಕೆಗಳ ಬಾಗದ ವಿಚಾರವಾಗಿ ಆಗಾಗ್ಗೆ ಕಲಹ ನಡೆಯುತ್ತಿತ್ತು. ಕಲಹದ ವೇಳೆ ಗೊವಿಂದರಾಜು ದೊಣ್ಣೆಯಿಂದ ನನ್ನ ಗಂಡನ ತಲೆಗೆ ಹೊಡೆದು, ನಂತರ ಕಾವೇರಿ ನದಿಗೆ ತಳ್ಳಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಘಟನೆ ತಿಳಿದೊಡನೆ ಇನ್ಸ್ಪೆಕ್ಟರ್ ಜಗದೀಶ್ ಅವರ ನೇತೃತ್ವದಲ್ಲಿ ಪೇದೆಗಳಾದ ಶಶಿಮೂರ್ತಿ ಮತ್ತು ರಮೇಶ್ ಸ್ಥಳಕ್ಕೆ ಭೇಟಿ ನೀಡಿ ಶವವನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಕುರಿತು ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…
ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…
ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…