ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯ ವ್ಯಾಪ್ತಿಯಲ್ಲಿ 80 ಎಕರೆಗೂ ಹೆಚ್ಚು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಬೆಂಕಿಗೆ ಆಹುತಿಯಾಗಿದೆ.
ಹನೂರು ತಾಲ್ಲೂಕಿನ ಬಿಆರ್ಟಿ ವನ್ಯಜೀವಿ ವಲಯ ವ್ಯಾಪ್ತಿಯ ನೆಲ್ಲಿಕತ್ರಿ ಅರಣ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಹಾಗೂ ಗಾಳಿ ಹೆಚ್ಚಾಗಿರುವುದರಿಂದ ಏಕಾಏಕಿ ಕಾಡ್ಗಿಚ್ಚು ವ್ಯಾಪಿಸಿ ಸುಮಾರು 30 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ ಎಂದು ಅಂದಾಜಿಸಲಾಗಿದೆ.
ಮಧ್ಯಾಹ್ನ 1 ಗಂಟೆಯ ವೇಳೆ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯ ಗುಂಡಿಮಾಳ ಗ್ರಾಮದ ಅರಣ್ಯ ಪ್ರದೇಶದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು 50 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಸುಟ್ಟು ಕರಕಲಾಗಿದೆ. ಅರಣ್ಯಕ್ಕೆ ಬೆಂಕಿ ಕಾಣಿಸಿಕೊಂಡಿರುವುದು ವಿಚಾರ ತಿಳಿಯುತ್ತಿದ್ದಂತೆ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯ ಆರ್ಎಫ್ಒ ಪ್ರಮೋದ್ ಹಾಗೂ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವರ್ಗದವರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ, ಕಾಡ್ಗಿಚ್ಚು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಲೂರು ವಲಯ ವ್ಯಾಪ್ತಿಯಲ್ಲಿ 15 ಎಕರೆ ಹಾಗೂ ಗುಂಡಿಮಾಳ ಅರಣ್ಯ ಪ್ರದೇಶದಲ್ಲಿ 20 ಎಕರೆಯಷ್ಟು ಕಾಡ್ಗಿಚ್ಚಿಗೆ ಆಹುತಿಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳ ಜಂಟಿ ಕಾರ್ಯಚರಣೆಯಿಂದ ಬೆಂಕಿಯನ್ನು ಹತೋಟಿಗೆ ತರಲಾಗಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…