ಚಾಮರಾಜನಗರ

ಹನೂರು| ಎಚ್‌ಸಿಎಂ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಹನೂರು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಸಿ.ಮಹದೇವಪ್ಪ ಅಭಿಮಾನಿ ಬಳಗ ಸಮೃದ್ಧಿ ಫೌಂಡೇಶನ್, ಚಾರಿಟೇಬಲ್ ಟ್ರಸ್ಟ್ ಬೆಂಗಳೂರು, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಇಂದಿನ ದಿನಗಳಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯವಂತರಾಗಿದ್ದಾರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪರವರ ಹುಟ್ಟು ಹಬ್ಬದ ಪ್ರಯುಕ್ತ ಸಾಮಾಜಿಕ ಕಾರ್ಯಕ್ರಮ ಆಯೋಜನೆ ಮಾಡಿರುವುದರಿಂದ ನೂರಾರು ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಶಿಬಿರಕ್ಕೆ ಬಂದಿರುವ ಶಿಬಿರಾರ್ಥಿಗಳು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ಮುಚ್ಚುಮರೆ ಇಲ್ಲದೆ ವೈದ್ಯಾಧಿಕಾರಿಗಳಿಗೆ ತಮ್ಮ ಸಮಸ್ಯೆ ಹೇಳಿಕೊಂಡರೆ ಉತ್ತಮ ಚಿಕಿತ್ಸೆ ಸಿಗಲಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡಿಸಿ ಗುಣಮುಖರನ್ನಾಗಿ ಮಾಡಿ ಮತ್ತೆ ವಾಪಸ್ ತಂದುಬಿಡುವ ಕಾರ್ಯವನ್ನು ಸಹ ಆಸ್ಪತ್ರೆಯವರು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ನಿರ್ದೇಶಕರಾದ ಶಾಹುಲ್ ಅಹಮದ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಿಎಪಿಎಂಸಿ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

11 mins ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

15 mins ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

20 mins ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

39 mins ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

52 mins ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago