ಚಾಮರಾಜನಗರ

ಹನೂರು| ಎಚ್‌ಸಿಎಂ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

ಹನೂರು: ರಾಜ್ಯದ ಹಿಂದುಳಿದ ವರ್ಗದವರು, ಅಸಹಾಯಕರ ಪರ ಸದಾ ಕಾಳಜಿ ಹೊಂದಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ ಮಾಡಿರುವುದು ಸಂತಸದ ವಿಚಾರ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.

ಹನೂರು ಪಟ್ಟಣದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌.ಸಿ.ಮಹದೇವಪ್ಪ ಅಭಿಮಾನಿ ಬಳಗ ಸಮೃದ್ಧಿ ಫೌಂಡೇಶನ್, ಚಾರಿಟೇಬಲ್ ಟ್ರಸ್ಟ್ ಬೆಂಗಳೂರು, ಈಸ್ಟ್ ಪಾಯಿಂಟ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಇಂದಿನ ದಿನಗಳಲ್ಲಿ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು. ಆರೋಗ್ಯವಂತರಾಗಿದ್ದಾರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು. ಈ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಎಸ್ ಸಿ ಮಹದೇವಪ್ಪರವರ ಹುಟ್ಟು ಹಬ್ಬದ ಪ್ರಯುಕ್ತ ಸಾಮಾಜಿಕ ಕಾರ್ಯಕ್ರಮ ಆಯೋಜನೆ ಮಾಡಿರುವುದರಿಂದ ನೂರಾರು ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಶಿಬಿರಕ್ಕೆ ಬಂದಿರುವ ಶಿಬಿರಾರ್ಥಿಗಳು ತಮ್ಮ ಯಾವುದೇ ಸಮಸ್ಯೆಗಳಿದ್ದರೂ ಮುಚ್ಚುಮರೆ ಇಲ್ಲದೆ ವೈದ್ಯಾಧಿಕಾರಿಗಳಿಗೆ ತಮ್ಮ ಸಮಸ್ಯೆ ಹೇಳಿಕೊಂಡರೆ ಉತ್ತಮ ಚಿಕಿತ್ಸೆ ಸಿಗಲಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಕೊಡಿಸಿ ಗುಣಮುಖರನ್ನಾಗಿ ಮಾಡಿ ಮತ್ತೆ ವಾಪಸ್ ತಂದುಬಿಡುವ ಕಾರ್ಯವನ್ನು ಸಹ ಆಸ್ಪತ್ರೆಯವರು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.

ಕಾರ್ಯಕ್ರಮದಲ್ಲಿ ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ರಾಜ್ಯ ಉಪ್ಪಾರ ನಿಗಮದ ಮಾಜಿ ಅಧ್ಯಕ್ಷ ಶಿವಕುಮಾರ್, ನಿರ್ದೇಶಕರಾದ ಶಾಹುಲ್ ಅಹಮದ್, ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಿಎಪಿಎಂಸಿ ಅಧ್ಯಕ್ಷ ನಟರಾಜು ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

2 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

2 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

2 hours ago