temple-robbery-news
ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ದೊಡ್ಡಲ್ಲತ್ತೂರು ಮಾರಮ್ಮ ದೇವಾಲಯದಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ.
ಇಲ್ಲಿನ ದೇವಾಲಯದ ಬೀಗ ಹೊಡೆದು ಒಳನುಗ್ಗಿರುವ ದುಷ್ಕರ್ಮಿಗಳು, ದೇವಾಲಯದ ಒಳಗೆ ಇದ್ದ ಎರಡು ಹುಂಡಿಗಳನ್ನು ಮುರಿದು ಹಣ ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು
ಕಳ್ಳರು ದೋಚಿದ ಹಣದ ಪ್ರಮಾಣ ಇನ್ನೂ ಖಚಿತವಾಗಿಲ್ಲ. ದೋಚಿದ ಬಳಿಕ ಹುಂಡಿಗಳನ್ನು ದೇವಾಲಯದ ಮುಂಭಾಗದ ರಸ್ತೆಯಲ್ಲಿ ಬಿಸಾಡಿ ಹೋಗಿದ್ದಾರೆ.
ಮಾಹಿತಿ ದೊರೆತ ತಕ್ಷಣ ರಾಮಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…