ಚಾಮರಾಜನಗರ

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ ಮಹಾರುದ್ರಾಭಿಷೇಕ ಪೂಜೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು.

ಶ್ರೀ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪ್ರತಿ ಗುರುವಾರ ಸ್ವಾಮಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಗುತ್ತದೆ. ಅದರಂತೆ ಬೇಡಗಂಪಣ ಸಮುದಾಯದ ಅರ್ಚಕರು ಭಕ್ತಿ ಶ್ರದ್ಧೆಯಿಂದ ಪೂಜೆ ನೆರವೇರಿಸಿದರು.

ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗಿನ ಕಾಲಾವಕಾಶದಲ್ಲಿ 101 ತೆಂಗಿನ ಕಾಯಿ 101 ಅಕ್ಕಿ ತಂಬಿಟ್ಟು, 101 ಎಳ್ಳಿನ ಉಂಡೆ, ನೆನೆ ಹಾಕಿದ ಹಸಿ ಕಡಲೆ ಅಕ್ಕಿಯನ್ನು ಪಡಿತರವನ್ನಾಗಿ ಬೇಡಗಂಪಣ ಅರ್ಚಕರು ಬಳಕೆ ಮಾಡಿ ಪೂಜೆ ಸಲ್ಲಿಸಿದರು.

ಶ್ರೀ ವೀರಭದ್ರೇಶ್ವರ, ಬಸವೇಶ್ವರ ಉತ್ಸವ ಮೂರ್ತಿಗಳಿಗೆ ಜಲ ಅಭಿಷೇಕ, ವಿಭೂತಿ ಧಾರಣೆ, ಬಿಲ್ವದಳ, ಪಂಚಾಮೃತ ಅಭಿಷೇಕವನ್ನು 101 ಬಾರಿ ನೆರವೇರಿಸಲಾಗುತ್ತದೆ. ಮೊದಲ ಹಾಗೂ ಕೊನೆಯ ಪೂಜೆಯನ್ನು ದೇವಾಲಯದ ಹೊರಗಿನ ಗಣಪತಿ, ಆಲಂಬಾಡಿ, ಬಸವೇಶ್ವರ, ಗಾಳಿ ಬಸವೇಶ್ವರ ಕಟ್ಟೆ ಬಸವೇಶ್ವರ, ಇಷ್ಟಾರ್ಥ ಸಿದ್ಧಿಪೀಠ ದ್ವಜಸ್ತಂಭ, ಬೇಡರ ಕಣ್ಣಪ್ಪ, ಶ್ರೀ ಕಾಳಹಸ್ತಿಶ್ವರ, ಹುಲಿವಾಹನ, ಬಸವ ವಾಹನ ರುದ್ರಾಕ್ಷಿ ಮಂಟಪಗಳಿಗೂ ಪೂಜೆ ನೆರವೇರಿಸಲಾಗುತ್ತದೆ.

ಪಂಚಾಮೃತ ಅಭಿಷೇಕದ ಮೇಲೆ ಕಿರೀಟಧಾರಣೆ ಅಲಂಕಾರ ಮಾಡಿ ಸೇವಾರ್ಥದಾರರಿಗೆ ದರ್ಶನ ನೀಡಲಾಗುತ್ತದೆ. ಅಭಿಷೇಕವನ್ನು ತೆರವುಗೊಳಿಸಿ, ವಿಶೇಷ ಹೂವಿನ ಅಲಂಕಾರ ಮಾಡಿ ದೀಪ ದೂಪದಾರತಿಯೊಂದಿಗೆ ಮಹಾ ಮಂಗಳಾರತಿ ನೆರವೇರಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

6 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

7 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

7 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

8 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

9 hours ago