ಚಾಮರಾಜನಗರ

ಹನೂರು: ಮಹದೇಶ್ವರ ಸ್ವಾಮಿಗೆ ನೆರವೇರಿದ ಮಹಾರುದ್ರಾಭಿಷೇಕ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹದೇಶ್ವರ ಸ್ವಾಮಿಗೆ ಗುರುವಾರ ಮಹಾರುದ್ರಾಭಿಷೇಕ ಪೂಜೆಯನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು.

ಶ್ರೀ ಮಹದೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಪ್ರತಿ ಗುರುವಾರ ಸ್ವಾಮಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಗುತ್ತದೆ. ಅದರಂತೆ ಬೇಡಗಂಪಣ ಸಮುದಾಯದ ಅರ್ಚಕರು ಭಕ್ತಿ ಶ್ರದ್ಧೆಯಿಂದ ಪೂಜೆ ನೆರವೇರಿಸಿದರು.

ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗಿನ ಕಾಲಾವಕಾಶದಲ್ಲಿ 101 ತೆಂಗಿನ ಕಾಯಿ 101 ಅಕ್ಕಿ ತಂಬಿಟ್ಟು, 101 ಎಳ್ಳಿನ ಉಂಡೆ, ನೆನೆ ಹಾಕಿದ ಹಸಿ ಕಡಲೆ ಅಕ್ಕಿಯನ್ನು ಪಡಿತರವನ್ನಾಗಿ ಬೇಡಗಂಪಣ ಅರ್ಚಕರು ಬಳಕೆ ಮಾಡಿ ಪೂಜೆ ಸಲ್ಲಿಸಿದರು.

ಶ್ರೀ ವೀರಭದ್ರೇಶ್ವರ, ಬಸವೇಶ್ವರ ಉತ್ಸವ ಮೂರ್ತಿಗಳಿಗೆ ಜಲ ಅಭಿಷೇಕ, ವಿಭೂತಿ ಧಾರಣೆ, ಬಿಲ್ವದಳ, ಪಂಚಾಮೃತ ಅಭಿಷೇಕವನ್ನು 101 ಬಾರಿ ನೆರವೇರಿಸಲಾಗುತ್ತದೆ. ಮೊದಲ ಹಾಗೂ ಕೊನೆಯ ಪೂಜೆಯನ್ನು ದೇವಾಲಯದ ಹೊರಗಿನ ಗಣಪತಿ, ಆಲಂಬಾಡಿ, ಬಸವೇಶ್ವರ, ಗಾಳಿ ಬಸವೇಶ್ವರ ಕಟ್ಟೆ ಬಸವೇಶ್ವರ, ಇಷ್ಟಾರ್ಥ ಸಿದ್ಧಿಪೀಠ ದ್ವಜಸ್ತಂಭ, ಬೇಡರ ಕಣ್ಣಪ್ಪ, ಶ್ರೀ ಕಾಳಹಸ್ತಿಶ್ವರ, ಹುಲಿವಾಹನ, ಬಸವ ವಾಹನ ರುದ್ರಾಕ್ಷಿ ಮಂಟಪಗಳಿಗೂ ಪೂಜೆ ನೆರವೇರಿಸಲಾಗುತ್ತದೆ.

ಪಂಚಾಮೃತ ಅಭಿಷೇಕದ ಮೇಲೆ ಕಿರೀಟಧಾರಣೆ ಅಲಂಕಾರ ಮಾಡಿ ಸೇವಾರ್ಥದಾರರಿಗೆ ದರ್ಶನ ನೀಡಲಾಗುತ್ತದೆ. ಅಭಿಷೇಕವನ್ನು ತೆರವುಗೊಳಿಸಿ, ವಿಶೇಷ ಹೂವಿನ ಅಲಂಕಾರ ಮಾಡಿ ದೀಪ ದೂಪದಾರತಿಯೊಂದಿಗೆ ಮಹಾ ಮಂಗಳಾರತಿ ನೆರವೇರಿಸಲಿದ್ದಾರೆ.

ಆಂದೋಲನ ಡೆಸ್ಕ್

Recent Posts

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

17 mins ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

42 mins ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

48 mins ago

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…

57 mins ago

ಹನೂರು| ಭಿಕ್ಷೆ ಬೇಡುತ್ತಿದ್ದ ಬಾಲಕನ ರಕ್ಷಣೆ: ಮಕ್ಕಳ ರಕ್ಷಣಾ ಘಟಕದವರಿಂದ ಬಾಲಮಂದಿರಕ್ಕೆ ಸೇರ್ಪಡೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…

1 hour ago

16 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ ಆದೇಶ

ನವದೆಹಲಿ: ಭಾರತ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ…

2 hours ago