ಚಾಮರಾಜನಗರ

ಹನೂರು | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪ್ರತಿಭಟನೆ

ಹನೂರು : ಕುಡಿಯುವ ನೀರು, ಇ-ಸ್ವತ್ತು, ಪೋಡಿ ಹಾಗೂ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ 500ಕ್ಕೂ ಹೆಚ್ಚು ರೈತ ಮುಖಂಡರು ಹಾಗೂ ಗ್ರಾಮಸ್ಥರು ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದರು.

ನಂತರ ಶೈಲೇಂದ್ರ ಮಾತನಾಡಿ, ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದರೂ ಇದನ್ನು ಬಗೆಹರಿಸುವಲ್ಲಿ ಪಿಡಿಒ ವಿಫಲರಾಗಿದ್ದಾರೆ. 7 ಗ್ರಾಮಗಳಲ್ಲಿ ಕೊಳವೆಬಾವಿ ಕೊರೆದು ವರ್ಷಗಟ್ಟಲೆ ಆಗಿದ್ದರು ಇನ್ನು ಮೋಟಾರ್ ವ್ಯವಸ್ಥೆ ಕಲ್ಪಿಸದೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಗಳಿಗೆ ಪಿಡಿಒ ನಿರ್ಲಕ್ಷ್ಯ ದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಈ ಕೂಡಲೇ ಈತನ ವಿರುದ್ಧ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು..

ಇದಲ್ಲದೆ ಸಮರ್ಪಕ ದಾಖಲಾತಿ ಕಂದಾಯ ಪಾವತಿ ಮಾಡಿದರು ಇ-ಸ್ವತ್ತು ನೀಡದೆ ಸಾರ್ವಜನಿಕರನ್ನು ಸತಾಯಿಸುತ್ತಿದ್ದಾರೆ. ಇದರಿಂದ ಫಲಾನುಭವಿಗಳಿಗೆ ತೊಂದರೆಯಾಗುತ್ತಿದ್ದು ಸರ್ಕಾರದ ನಿಯಮದಂತೆ ಈ ಸ್ವತ್ತು ವಿತರಣೆ ಮಾಡಬೇಕು ಎಂದರು.

ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗಿದೆ ಅಂತರ್ಜಲ ಮಟ್ಟ ಕುಸಿದು ರೈತರು ಸಂಕಷ್ಟಕ್ಕೀಡಾಗಿದ್ದಾರೆ, ಜಾನುವಾರುಗಳಿಗೆ ಗೋಶಾಲೆ ತೆರೆದು ಕುಡಿಯುವ ನೀರು, ಮೇವು ಪೂರೈಕೆ ಮಾಡಬೇಕು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಹೆಚ್ಚು ಅನುದಾನ ನೀಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಇಒ ಉಮೇಶ್ ಮಾತನಾಡಿ, ಹನೂರು ತಾಲೂಕು ವ್ಯಾಪ್ತಿಯಲ್ಲಿ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಸಮರ್ಪಕ ನೀರು ಪೂರೈಕೆ ಮಾಡಲಾಗುತ್ತಿದೆ ಅದರಂತೆ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ನೀರು ಪೂರೈಕೆ ಮಾಡಲಾಗುವುದು. ಈ ಸ್ವತ್ತು ವಿಳಂಬವಾಗಿರುವುದಕ್ಕೆ ಸ್ಥಳ ಪರಿಶೀಲನೆ ನಡೆಸಿ ದಾಖಲಾತಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ರೈತ ಮುಖಂಡರು ಮಾತನಾಡಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ಪಹಣಿ ಜಮೀನುಗಳಿಗೆ ಪ್ರತ್ಯೇಕ ಫೋಡು ಆಗದೆ ಇರುವುದರಿಂದ ಸರ್ಕಾರಿ ಸೌಲಭ್ಯಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಈ ಕೂಡಲೇ ಪೋಡಿನ ವ್ಯವಸ್ಥೆ ಮಾಡಬೇಕು ಎಂದರು.

ಕರೋನಗೂ ಮುನ್ನಾ ತಮಿಳುನಾಡು ಹಾಗೂ ಜಿಲ್ಲಾ ಕೇಂದ್ರಕ್ಕೆ ಹೆಚ್ಚು ಬಸ್ ವ್ಯವಸ್ಥೆ ಮಾಡಲಾಗಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಈ ಕೂಡಲೇ ಬಸ್ ವ್ಯವಸ್ಥೆ ಮಾಡಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ ಹಿನ್ನೆಲೆ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ಕೆಎಸ್ಆರ್ಟಿಸಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಭಟನೆಯ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಅರ್ಪುದ ರಾಜ್, ಸದಸ್ಯರಾದ ಡೇವಿಡ್ ಪೀಟರ್, ವಸಂತ್ ಕುಮಾರ್ ರವಿ ಬಸವರಾಜು ವಲ್ಲಭದಾಸ್ ಲೂರ್ದು ಸ್ವಾಮಿ ಜೋಸೆಫ್ ಪುಟ್ಟಸ್ವಾಮಿ ಆರೋಗ್ಯಸ್ವಾಮಿ ಅಂತೋಣಿ ಸ್ವಾಮಿ, ಸೂಸೈ ಮಾಣಿಕ್ಯಂ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ರೈತರು ಮಹಿಳೆಯರು ಗ್ರಾಮಸ್ಥರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

1 hour ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

1 hour ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

1 hour ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

1 hour ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

1 hour ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

1 hour ago