ಚಾಮರಾಜನಗರ

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದ ನಾರಾಯಣ ಮೂರ್ತಿ, ಪ್ರತೀಶ್ ರಾಜು ನಂಜಯ್ಯ ಸೋಮಶೇಖರ್ ಹಾಗೂ ದಿವ್ಯ ಶ್ರೀ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ, ಅಡಕೆ ತೆಂಗಿನ ಗಿಡಗಳು, ತಂತಿ ಬೇಲಿ ಕೃಷಿ ಪರಿಕರಗಳು ನಾಶವಾಗಿದೆ.

ಘಟನೆ ವಿವರ
ಗುರುವಾರ ಮುಂಜಾನೆ ಸರಿಸುಮಾರು 2:30 ಗಂಟೆ ವೇಳೆ ಬೇಲಿ ಮುರಿದು ಒಳ ನುಗ್ಗಿದ ಕಾಡಾನೆಗಳು ಸುಮಾರು ಬಾಳೆ ಗಿಡ ಸೇರಿದಂತೆ 30 ಅಡಿಕೆ, 30 ತೆಂಗು ಸಸಿಗಳನ್ನು ತುಳಿದಿದೆ. ಅಲ್ಲದೆ ಜಮೀನಿನ ಸುತ್ತಲೂ ಅಳವಡಿಸಿದ್ದ ತಂತಿ ಬೇಲಿಯನ್ನು ಮುರಿದು ಹೊರ ಹೋಗಿವೆ. ಸೋಲರ್ ಫೆನ್ಸಿಂಗ್ ಹಾಗೂ ಕೃಷಿ ಪರಿಕರಗಳು ಸಹ ಹಾಳಾಗಿದ್ದು ಅಂದಾಜು 2.ಲಕ್ಷ ರೂ ನಷ್ಟವಾಗಿದೆ ಎಂದು ತಿಳಿದು ಬಂದಿದೆ.

ಪರಿಹಾರ ನೀಡಿ
ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಬೆಳೆ ಪರಿಹಾರವನ್ನು ಹಾಗೂ ಹಾನಿಗೊಳಗಾದ ಪರಿಕಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು, ಜೊತೆಗೆ ಮುಂದಿನ ದಿನಗಳಲ್ಲಿ ಕಾಡಾನೆ ಇತ್ತ ಬಾರದಂತೆ ತಡೆಗಟ್ಟಬೇಕು ಎಂದು ರೈತ ನಾರಾಯಣ ಮೂರ್ತಿ ಆಗ್ರಹ ಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ರೈತರಿಂದ ದಾಖಲಾತಿ ಪಡೆದುಕೊಂಡು ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಹನೂರು ಬಫರ್ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ಜಿತೇಂದ್ರ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

7 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

7 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

8 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

8 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

13 hours ago