ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದ ನಾರಾಯಣ ಮೂರ್ತಿ, ಪ್ರತೀಶ್ ರಾಜು ನಂಜಯ್ಯ ಸೋಮಶೇಖರ್ ಹಾಗೂ ದಿವ್ಯ ಶ್ರೀ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ, ಅಡಕೆ ತೆಂಗಿನ ಗಿಡಗಳು, ತಂತಿ ಬೇಲಿ ಕೃಷಿ ಪರಿಕರಗಳು ನಾಶವಾಗಿದೆ.
ಘಟನೆ ವಿವರ
ಗುರುವಾರ ಮುಂಜಾನೆ ಸರಿಸುಮಾರು 2:30 ಗಂಟೆ ವೇಳೆ ಬೇಲಿ ಮುರಿದು ಒಳ ನುಗ್ಗಿದ ಕಾಡಾನೆಗಳು ಸುಮಾರು ಬಾಳೆ ಗಿಡ ಸೇರಿದಂತೆ 30 ಅಡಿಕೆ, 30 ತೆಂಗು ಸಸಿಗಳನ್ನು ತುಳಿದಿದೆ. ಅಲ್ಲದೆ ಜಮೀನಿನ ಸುತ್ತಲೂ ಅಳವಡಿಸಿದ್ದ ತಂತಿ ಬೇಲಿಯನ್ನು ಮುರಿದು ಹೊರ ಹೋಗಿವೆ. ಸೋಲರ್ ಫೆನ್ಸಿಂಗ್ ಹಾಗೂ ಕೃಷಿ ಪರಿಕರಗಳು ಸಹ ಹಾಳಾಗಿದ್ದು ಅಂದಾಜು 2.ಲಕ್ಷ ರೂ ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಪರಿಹಾರ ನೀಡಿ
ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಬೆಳೆ ಪರಿಹಾರವನ್ನು ಹಾಗೂ ಹಾನಿಗೊಳಗಾದ ಪರಿಕಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು, ಜೊತೆಗೆ ಮುಂದಿನ ದಿನಗಳಲ್ಲಿ ಕಾಡಾನೆ ಇತ್ತ ಬಾರದಂತೆ ತಡೆಗಟ್ಟಬೇಕು ಎಂದು ರೈತ ನಾರಾಯಣ ಮೂರ್ತಿ ಆಗ್ರಹ ಪಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ರೈತರಿಂದ ದಾಖಲಾತಿ ಪಡೆದುಕೊಂಡು ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಹನೂರು ಬಫರ್ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ಜಿತೇಂದ್ರ ಭರವಸೆ ನೀಡಿದ್ದಾರೆ.
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…