ಚಾಮರಾಜನಗರ

ಹನೂರು | ಕಾಡಾನೆದಾಳಿಗೆ 500ಕ್ಕೂ ಹೆಚ್ಚು ಬಾಳೆ ನಾಶ

ಹನೂರು : ಏಕ ಕಾಲದಲ್ಲಿ ಬುಧವಾರ ತಡರಾತ್ರಿ ಕಾಡಾನೆಗಳು ರೈತರ ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳ ಮೇಲೆ ದಾಳಿ ನಡೆಸಿ ಸುಮಾರು 500ಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶ ಮಾಡಿರುವ ಘಟನೆ ಚಿಕ್ಕಮಾಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ತಾಲೂಕಿನ ಚಿಕ್ಕ ಮಾಲಾಪುರ ಗ್ರಾಮದ ನಾರಾಯಣ ಮೂರ್ತಿ, ಪ್ರತೀಶ್ ರಾಜು ನಂಜಯ್ಯ ಸೋಮಶೇಖರ್ ಹಾಗೂ ದಿವ್ಯ ಶ್ರೀ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಬಾಳೆ, ಅಡಕೆ ತೆಂಗಿನ ಗಿಡಗಳು, ತಂತಿ ಬೇಲಿ ಕೃಷಿ ಪರಿಕರಗಳು ನಾಶವಾಗಿದೆ.

ಘಟನೆ ವಿವರ
ಗುರುವಾರ ಮುಂಜಾನೆ ಸರಿಸುಮಾರು 2:30 ಗಂಟೆ ವೇಳೆ ಬೇಲಿ ಮುರಿದು ಒಳ ನುಗ್ಗಿದ ಕಾಡಾನೆಗಳು ಸುಮಾರು ಬಾಳೆ ಗಿಡ ಸೇರಿದಂತೆ 30 ಅಡಿಕೆ, 30 ತೆಂಗು ಸಸಿಗಳನ್ನು ತುಳಿದಿದೆ. ಅಲ್ಲದೆ ಜಮೀನಿನ ಸುತ್ತಲೂ ಅಳವಡಿಸಿದ್ದ ತಂತಿ ಬೇಲಿಯನ್ನು ಮುರಿದು ಹೊರ ಹೋಗಿವೆ. ಸೋಲರ್ ಫೆನ್ಸಿಂಗ್ ಹಾಗೂ ಕೃಷಿ ಪರಿಕರಗಳು ಸಹ ಹಾಳಾಗಿದ್ದು ಅಂದಾಜು 2.ಲಕ್ಷ ರೂ ನಷ್ಟವಾಗಿದೆ ಎಂದು ತಿಳಿದು ಬಂದಿದೆ.

ಪರಿಹಾರ ನೀಡಿ
ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಮಹಜರು ನಡೆಸಿ ಬೆಳೆ ಪರಿಹಾರವನ್ನು ಹಾಗೂ ಹಾನಿಗೊಳಗಾದ ಪರಿಕಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು, ಜೊತೆಗೆ ಮುಂದಿನ ದಿನಗಳಲ್ಲಿ ಕಾಡಾನೆ ಇತ್ತ ಬಾರದಂತೆ ತಡೆಗಟ್ಟಬೇಕು ಎಂದು ರೈತ ನಾರಾಯಣ ಮೂರ್ತಿ ಆಗ್ರಹ ಪಡಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಲಾಗುವುದು. ರೈತರಿಂದ ದಾಖಲಾತಿ ಪಡೆದುಕೊಂಡು ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಹನೂರು ಬಫರ್ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ಜಿತೇಂದ್ರ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

7 mins ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

2 hours ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

2 hours ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

3 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

15 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

17 hours ago