ಹನೂರು: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ (೩೦) ಮಕ್ಕಳಾದ ಚಂದ್ರು (೮) ದಿವ್ಯ (೧೧) ಮೃತಪಟ್ಟವರು.
ಘಟನೆ ವಿವರ: ಕಾಡುಹೊಲ ಗ್ರಾಮದ ಸುಶೀಲರವರ ಮನೆಗೆ ಸುಶೀಲ ರವರ ತಮ್ಮ ಮಾದೇವ ಆಗಮಿಸಿ ಭಾವ ಮಹೇಶ್ ನ ಮೊಬೈಲ್ ಮತ್ತು ಹಣವನ್ನು ತೆಗೆದುಕೊಂಡು ಹೋಗಿದ್ದ ಎನ್ನಲಾಗಿದೆ. ಈ ಸಂಬಂಧ ಮಹೇಶ್ ಬಾಮೈದನಿಗೆ ಮೊಬೈಲ್ ಮತ್ತು ಹಣ ತೆಗೆದುಕೊಂಡು ಹೋಗಿರುವ ಬಗ್ಗೆ ದೂರವಾಣಿ ಕರೆ ಮಾಡಿದಾಗ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ಸಂಬಂಧ ಗಂಡ ಮಹೇಶ್ ಹೆಂಡತಿ ಸುಶೀಲ ರವರ ಜೊತೆ ಕಷ್ಟಪಟ್ಟು ಸಂಪಾದನೆ ಮಾಡಿರುವ ಹಣ ಮತ್ತು ಮೊಬೈಲ್ ಅನು ನಿನ್ನ ತಮ್ಮ ತೆಗೆದುಕೊಂಡು ಹೋಗಿದ್ದಾನೆ ಎಂದು ಜಗಳವಾಡಿದ್ದಾನೆ. ಇದರಿಂದ ಬೇಸತ್ತ ಸುಶೀಲ ತನ್ನ ಇಬ್ಬರು ಮಕ್ಕಳ ಜೊತೆ ಭಾನುವಾರ ರಾತ್ರಿ ಮನೆಯಿಂದ ತೆರಳಿ ಕಾಡುಹೂಲ ಸಮೀಪದಲ್ಲಿನ ಜಮೀನೊಂದರ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೋಮವಾರದಂದು ಜಮೀನಿನ ಮಾಲೀಕ ಬಾವಿಯಲ್ಲಿ ನೀರು ತರಲು ತೆರಳಿದಾಗ ಬಾವಿಯ ಬಳಿ ಚಪ್ಪಲಿ ತಾಳಿ ಹಾಗೂ ಇನ್ನಿತರ ವಸ್ತುಗಳು ಕಂಡು ಬಂದಿದೆ. ತಕ್ಷಣ ಗ್ರಾಮಸ್ಥರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ಸಹಕಾರದಿಂದ ಬಾವಿಯಲ್ಲಿ ಮುಳುಗಿದ್ದ ಮೂವರನ್ನು ಮೇಲೆತ್ತಿದ್ದಾರೆ.
ಈ ಸಂಬಂಧ ಸುಶೀಲರವರ ತಂದೆ ವೀರಣ್ಣ ಅಳಿಯ ಮಹೇಶ್ ಮೇಲೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಮಲೆಮಾದೇಶ್ವರ ಬೆಟ್ಟ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮೂವರ ಶವವನ್ನು ಮಲೆಮಹದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಜಗದೀಶ್ ಆಂದೋಲನಕ್ಕೆ ತಿಳಿಸಿದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…