ಚಾಮರಾಜನಗರ

ಹನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದ ಎಂಟನೇ ವಾರ್ಡಿನ ಸದಸ್ಯ ಆನಂದ್ ಕುಮಾರ್ ಹಾಗೂ ಎರಡನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಸುದೇಶ್ ರವರು ನಾಮಪತ್ರ ಸಲ್ಲಿಸಿದ್ದರು. ಆನಂದ್ ರವರಿಗೆ ಶಾಸಕ ಎಂಆರ್ ಮಂಜುನಾಥ್ ಬಿಜೆಪಿ ಸದಸ್ಯೆ ರೂಪ, ಜೆಡಿಎಸ್ ಪಕ್ಷದ 6 ಸದಸ್ಯರು ಸೇರಿದಂತೆ 8 ಎಂಟು ಮತಗಳು ಸುದೇಶ್ ರವರಿಗೆ ಕಾಂಗ್ರೆಸ್ ಪಕ್ಷದ ಐದು ಮತಗಳು ಬಿದ್ದಿದ್ದು ಮೂರು ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಅಂತಿಮವಾಗಿ ಅಧ್ಯಕ್ಷರಾಗಿ ಮಮ್ತಾಜ್ ಬಾನು, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸಿಲ್ದಾರ್ ವೈ ಕೆ ಗುರುಪ್ರಸಾದ್ ಘೋಷಣೆ ಮಾಡಿದರು. ಮುಖ್ಯಾಧಿಕಾರಿ ಆರ್ ಅಶೋಕ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.

ಹನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ 18 ವರ್ಷಗಳ ಬಳಿಕ ಪಟ್ಟಣ ಪಂಚಾಯಿತಿಯಲ್ಲಿ ಜಾ.ದಳ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೊದಲ ಎರಡು ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರುಗಳೇ ಬಹುಮತ ಪಡೆದುಕೊಂಡಿದ್ದರಿಂದ ಅಧಿಕಾರ ಪಡೆದುಕೊಂಡಿತ್ತು. ಮೂರನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೆ ಸ್ಪಷ್ಟ ಬಹುಮತ ಬಾರದೆ ಇದ್ದಿದ್ದರಿಂದ ಮೂರನೇ ಚುನಾವಣೆಯ ಮೊದಲ ಅವಧಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಚಂದ್ರಮ್ಮ ಉಪಾಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾಗಿದ್ದರು.

ಎರಡನೇ ಅವಧಿಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸದಸ್ಯರುಗಳು 7 ಶಾಸಕ ಎಂಆರ್ ಮಂಜುನಾಥ್ ಸೇರಿದಂತೆ 8 ಸದಸ್ಯರು ಇರುವುದರಿಂದ ಮೊಟ್ಟಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಅಧಿಕಾರವನ್ನು ಜಾ.ದಳ ಪ್ರಪ್ರಥಮ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಚುನಾವಣೆಯ ಬಳಿಕ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಮೊಟ್ಟ ಮೊದಲ ಬಾರಿಗೆ ಮೈತ್ರಿ ಪಕ್ಷದ ಸದಸ್ಯರ ಜೊತೆಗೂಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಮೊಟ್ಟ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಾದ ಮುಮ್ತಾಜ್ ಬಾನು ರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಾದಳ ಪಕ್ಷದಲ್ಲಿ ಎಲ್ಲಾ ಸಮಾಜದವರನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದೇ ನಿಟ್ಟಿನಲ್ಲಿ ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕರ್ತರ ಸಂಭ್ರಮ: ಮೊಟ್ಟ ಮೊದಲ ಬಾರಿಗೆ ಹನೂರು ಪಟ್ಟಣದ ಇತಿಹಾಸದಲ್ಲಿಯೇ ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಲ್ಲಿ ಜಾದಳ ಅಧಿಕಾರ ಪಡೆದಿರಲಿಲ್ಲ, ಮೊದಲ ಬಾರಿಗೆ ಜಾದಳದ ಸದಸ್ಯರು ಪಟ್ಟಣ ಪಂಚಾಯಿತಿ ಚುಕ್ಕಾಣಿ ಅಲಂಕರಿಸಿದ ಹಿನ್ನೆಲೆ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಾರ್ಯಕರ್ತರು ಮುಖಂಡರುಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ವಿತರಣೆ ಮಾಡಿದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಬಂಡೀಪುರ ಅರಣ್ಯದಲ್ಲಿ ನೀರಿನ ಸಮಸ್ಯೆಗೆ ಬ್ರೇಕ್: ಸೋಲಾರ್‌ ಬೋರ್‌ವೆಲ್‌ ಮೂಲಕ ನೀರು ತುಂಬಿಸಲು ಪ್ಲಾನ್‌

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್‌ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…

6 mins ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

30 mins ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

49 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

1 hour ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

1 hour ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

5 hours ago