ಚಾಮರಾಜನಗರ

ಹನೂರು: ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮುಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ

ಹನೂರು: ಹನೂರು ಪಟ್ಟಣ ಪಂಚಾಯಿತಿಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಒಂದನೇ ವಾರ್ಡಿನ ಮಮ್ತಾಜ್ ಭಾನು ರವರು ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಇವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷ ಸ್ಥಾನಕ್ಕೆ ಜಾ.ದಳದ ಎಂಟನೇ ವಾರ್ಡಿನ ಸದಸ್ಯ ಆನಂದ್ ಕುಮಾರ್ ಹಾಗೂ ಎರಡನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಸುದೇಶ್ ರವರು ನಾಮಪತ್ರ ಸಲ್ಲಿಸಿದ್ದರು. ಆನಂದ್ ರವರಿಗೆ ಶಾಸಕ ಎಂಆರ್ ಮಂಜುನಾಥ್ ಬಿಜೆಪಿ ಸದಸ್ಯೆ ರೂಪ, ಜೆಡಿಎಸ್ ಪಕ್ಷದ 6 ಸದಸ್ಯರು ಸೇರಿದಂತೆ 8 ಎಂಟು ಮತಗಳು ಸುದೇಶ್ ರವರಿಗೆ ಕಾಂಗ್ರೆಸ್ ಪಕ್ಷದ ಐದು ಮತಗಳು ಬಿದ್ದಿದ್ದು ಮೂರು ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಅಂತಿಮವಾಗಿ ಅಧ್ಯಕ್ಷರಾಗಿ ಮಮ್ತಾಜ್ ಬಾನು, ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ತಹಸಿಲ್ದಾರ್ ವೈ ಕೆ ಗುರುಪ್ರಸಾದ್ ಘೋಷಣೆ ಮಾಡಿದರು. ಮುಖ್ಯಾಧಿಕಾರಿ ಆರ್ ಅಶೋಕ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು.

ಹನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದ 18 ವರ್ಷಗಳ ಬಳಿಕ ಪಟ್ಟಣ ಪಂಚಾಯಿತಿಯಲ್ಲಿ ಜಾ.ದಳ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮೊದಲ ಎರಡು ಅವಧಿಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರುಗಳೇ ಬಹುಮತ ಪಡೆದುಕೊಂಡಿದ್ದರಿಂದ ಅಧಿಕಾರ ಪಡೆದುಕೊಂಡಿತ್ತು. ಮೂರನೇ ಅವಧಿಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಗಳಿಗೆ ಸ್ಪಷ್ಟ ಬಹುಮತ ಬಾರದೆ ಇದ್ದಿದ್ದರಿಂದ ಮೂರನೇ ಚುನಾವಣೆಯ ಮೊದಲ ಅವಧಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಚಂದ್ರಮ್ಮ ಉಪಾಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾಗಿದ್ದರು.

ಎರಡನೇ ಅವಧಿಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸದಸ್ಯರುಗಳು 7 ಶಾಸಕ ಎಂಆರ್ ಮಂಜುನಾಥ್ ಸೇರಿದಂತೆ 8 ಸದಸ್ಯರು ಇರುವುದರಿಂದ ಮೊಟ್ಟಮೊದಲ ಬಾರಿಗೆ ಪಟ್ಟಣ ಪಂಚಾಯಿತಿ ಅಧಿಕಾರವನ್ನು ಜಾ.ದಳ ಪ್ರಪ್ರಥಮ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಚುನಾವಣೆಯ ಬಳಿಕ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಮೊಟ್ಟ ಮೊದಲ ಬಾರಿಗೆ ಮೈತ್ರಿ ಪಕ್ಷದ ಸದಸ್ಯರ ಜೊತೆಗೂಡಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಮೊಟ್ಟ ಮೊದಲ ಬಾರಿಗೆ ಅಲ್ಪಸಂಖ್ಯಾತ ಸಮುದಾಯದ ಸದಸ್ಯರಾದ ಮುಮ್ತಾಜ್ ಬಾನು ರವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಾದಳ ಪಕ್ಷದಲ್ಲಿ ಎಲ್ಲಾ ಸಮಾಜದವರನ್ನು ಒಗ್ಗೂಡಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಇದೇ ನಿಟ್ಟಿನಲ್ಲಿ ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ಅವರಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕರ್ತರ ಸಂಭ್ರಮ: ಮೊಟ್ಟ ಮೊದಲ ಬಾರಿಗೆ ಹನೂರು ಪಟ್ಟಣದ ಇತಿಹಾಸದಲ್ಲಿಯೇ ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯಿತಿಯಲ್ಲಿ ಜಾದಳ ಅಧಿಕಾರ ಪಡೆದಿರಲಿಲ್ಲ, ಮೊದಲ ಬಾರಿಗೆ ಜಾದಳದ ಸದಸ್ಯರು ಪಟ್ಟಣ ಪಂಚಾಯಿತಿ ಚುಕ್ಕಾಣಿ ಅಲಂಕರಿಸಿದ ಹಿನ್ನೆಲೆ ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಕಾರ್ಯಕರ್ತರು ಮುಖಂಡರುಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಸಿಹಿ ವಿತರಣೆ ಮಾಡಿದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

33 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago